alex Certify ವಲಸೆ ಕಾರ್ಮಿಕರು ತಮ್ಮ ಜಿಲ್ಲೆಗಳಿಗೆ ತೆರಳಲು ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಲಸೆ ಕಾರ್ಮಿಕರು ತಮ್ಮ ಜಿಲ್ಲೆಗಳಿಗೆ ತೆರಳಲು ಅವಕಾಶ

ಶಿವಮೊಗ್ಗ: ಕೋವಿಡ್ ತಪಾಸಣೆ ನಡೆಸಲು 2700 ರ್ಯಾಪಿಡ್ ಟೆಸ್ಟ್ ಕಿಟ್ಸ್ ಸ್ವೀಕರಿಸಲಾಗಿದ್ದು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಕೊರೋನಾ ವೈರಸ್‍ಗೆ ತುತ್ತಾಗಲು ಸಾಧ್ಯತೆ ಇರುವವರನ್ನು ಈ ಮೂಲಕ ತಪಾಸಣೆ ನಡೆಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಸಮಿತಿಯ ಸಭೆಯಲ್ಲಿ ಈ ಕುರಿತು ಸೂಚನೆ ನೀಡಿದ್ದಾರೆ. ವ್ಯಕ್ತಿಯ ರಕ್ತವನ್ನು ಸಂಗ್ರಹಿಸಿ ರ್ಯಾಪಿಡ್ ಟೆಸ್ಟ್ ಕಿಟ್ ಮೂಲಕ ಕೋವಿಡ್ ಪರೀಕ್ಷೆಯನ್ನು ನಡೆಸಲಾಗುವುದು. ಕರೋನಾಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಸೇರಿದಂತೆ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ ಒಟ್ಟು 670 ಮಂದಿ, ಕ್ವಾರೆಂಟೈನ್‍ನಲ್ಲಿರುವ ಸುಮಾರು 600 ಮಂದಿ, ಇನ್ನಿತರ ಅಗತ್ಯ ಸೇವೆಗಳಲ್ಲಿ ತೊಡಗಿಸಿಕೊಂಡಿರುವವರನ್ನು ಈ ಮೂಲಕ ತಪಾಸಣೆ ನಡೆಸಲಾಗುವುದು. ತಪಾಸಣೆಗೆ 18ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ತೆರಳಲು ಅವಕಾಶ: ಹೊರ ಜಿಲ್ಲೆಗಳಿಂದ ಬಂದು ಇಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ಅವರ ಜಿಲ್ಲೆಗಳಿಗೆ ತೆರಳಲು ಅವಕಾಶ ನೀಡಲಾಗುವುದು. ಪ್ರಸ್ತುತ ಕ್ವಾರೆಂಟೈನ್‍ನಲ್ಲಿರುವ ಅವರು ತಮ್ಮ ಜಿಲ್ಲೆಗಳಿಗೆ ತೆರಳಲು ಬಯಸಿದರೆ ತೆರಳಬಹುದಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...