ಬೆಂಗಳೂರು: ಜುಲೈ 5 ರ ಬದಲು ಜುಲೈ 12 ರಂದು ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರ ನಿಗದಿಯಾಗಿದ್ದ ಟಿಇಟಿ ಪರೀಕ್ಷೆಯ ದಿನಾಂಕವನ್ನು ಬದಲಿಸಿದ್ದು, ಜುಲೈ 12 ರಂದು ನಡೆಸಲಾಗುವುದು.
ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಜುಲೈ 5 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಅದೇ ದಿನ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ದಿನಾಂಕ ಕೂಡ ನಿಗದಿಯಾಗಿದೆ. ಇದರಿಂದ ಟಿಇಟಿ ಬರೆಯಲಿರುವ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತಿತ್ತು. ಪರೀಕ್ಷೆಗೆ ಬೇರೆ ದಿನ ನಿಗದಿಪಡಿಸಬೇಕೆಂದು ಒತ್ತಡ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಟಿಇಟಿ ಪರೀಕ್ಷೆ ದಿನಾಂಕವನ್ನು ಬದಲಿಸಲಾಗಿದೆ ಎಂದು ಹೇಳಲಾಗಿದೆ.