alex Certify ಕೇಂದ್ರ ಸರ್ಕಾರ ರಾಜ್ಯಕ್ಕೆ ಬೇಕಾಗುವಷ್ಟು ಲಸಿಕೆಗಳನ್ನ ಕಳುಹಿಸಿದೆ ಎಂದ ಆರ್​. ಅಶೋಕ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರ ರಾಜ್ಯಕ್ಕೆ ಬೇಕಾಗುವಷ್ಟು ಲಸಿಕೆಗಳನ್ನ ಕಳುಹಿಸಿದೆ ಎಂದ ಆರ್​. ಅಶೋಕ್​

ಕೊರೊನಾ 2ನೆ ಅಲೆ ನಡುವೆಯೇ ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಅಭಾವ ಉಂಟಾಗಿದೆ. ರಾಜ್ಯದಲ್ಲಿ ಉಂಟಾಗಿರುವ ಈ ಪರಿಸ್ಥಿತಿಯ ಬಗ್ಗೆ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಈ ಎಲ್ಲದರ ನಡುವೆ ಕಂದಾಯ ಸಚಿವ ಆರ್​. ಅಶೋಕ್​ ರಾಜ್ಯದಲ್ಲಿ ಕೊರೊನಾ ಲಸಿಕೆಯ 2ನೇ ಡೋಸ್​ ನೀಡುವಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್​.ಅಶೋಕ್​, ರಾಜ್ಯದಲ್ಲಿ 2ನೇ ಡೋಸ್​ ಲಸಿಕೆ ಹಂಚಿಕೆ ಕಾರ್ಯದಲ್ಲಿ ಯಾವುದೇ ಗೊಂದಲವಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬೇಕಾಗುವಷ್ಟು ಪ್ರಮಾಣದಲ್ಲಿ ಲಸಿಕೆಯನ್ನ ಕಳುಹಿಸಿಕೊಟ್ಟಿದೆ. ರಾಜ್ಯದ ಬಳಿ ಈಗಾಗಲೇ 6.5 ಲಕ್ಷ ಡೋಸ್​ ಲಸಿಕೆಯ ಸಂಗ್ರಹವಿದೆ. ಆದರೆ ಕೊವ್ಯಾಕ್ಸಿನ್​ ಡೋಸ್​ ಸಂಗ್ರಹದಲ್ಲಿ ಮಾತ್ರ ಕೊಂಚ ಸಮಸ್ಯೆ ಉಂಟಾಗಿದೆ ಎಂದು ಹೇಳಿದ್ದಾರೆ.

ಆದರೆ ರಾಜ್ಯದಲ್ಲಿ ಕೊರೊನಾ ಲಸಿಕೆ ಹಂಚಿಕೆ ವಿಚಾರದಲ್ಲಿ ಆತಂಕ ವ್ಯಕ್ತಪಡಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, 18 ರಿಂದ 44 ವರ್ಷದವರು ಹಾಗಿರಲಿ 45 ವರ್ಷ ಮೇಲ್ಪಟ್ಟವರಿಗೆ ನಿಗದಿತ ಸಮಯದಲ್ಲಿ 2ನೇ ಡೋಸ್​ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...