ಮೈಸೂರು : ಮೈಸೂರಿನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಮನೆ ಮಾಡಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಹೌದು. ನಕಲಿ ಪಾಸ್ ಪೋರ್ಟ್ ಪಡೆದು ಸುಮಾರು 70 ಜನ ಭಾರತದೊಳಗೆ ನುಸುಳಿದ್ದಾರೆ, ಎಚ್ಚರಿಕೆಯಿಂದಿರುವಂತೆ ಗುಪ್ತಚರ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ಡಿಜಿ & ಐಜಿಪಿ ಅಲೋಕ್ ಮೋಹನ್ ತುರ್ತಾಗಿ ಭದ್ರತೆ ಹೆಚ್ಚಳ ಮಾಡಿದ್ದಾರೆ.
ಪ್ರತಿ ಬಾರಿ ದಸರಾಗೆ 1700-2000 ಪೊಲೀಸರ ನಿಯೋಜಿಸಲಾಗ್ತಿತ್ತು. ಈ ಬಾರಿ ಭದ್ರತೆಗೆ 3500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಇಂದು ಬೆಳಗ್ಗೆ 9 ಗಂಟೆಗೆ 1568 ಪೊಲೀಸರ ನಿಯೋಜನೆ ಮಾಡಲಾಗಿದ್ದು, ಜೊತೆಗೆ 40 CAR ತುಕಡಿಗಳು, 30 KSRP ತುಕಡಿಗಳ ನಿಯೋಜನೆ ಮಾಡಲಾಗಿದೆ. ಶ್ರೀರಂಗಪಟ್ಟಣ, KRS ಪೊಲೀಸರಿಗೆ ಅಲರ್ಟ್ ಇರುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಏರ್ ಶೋ ಏರ್ಪಡಿಸಲಾಗಿದ್ದು, ಅಕ್ಟೋಬರ್ 22, 23ರಂದು ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನದಲ್ಲಿ ವೈಮಾನಿಕ ಪ್ರದರ್ಶನ ನಡೆಯಲಿದ್ದು, ವಿಮಾನಗಳ ಹಾರಾಟ, ಸೈನಿಕರ ಸಾಹಸ ಕಣ್ತುಂಬಿಕೊಳ್ಳಬಹುದು.