ಕಲಬುರ್ಗಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಭುಯ್ಯರ್ ಗ್ರಾಮದ ಬಳಿ ಘಟನೆ ನಡೆದಿದೆ.
ಸುಭಾಷ್ ಹಲಕೆರಿ(35), ಕುಪ್ಪಣ್ಣ ನವಲೆ(58) ಮೃತಪಟ್ಟವರೆಂದು ಹೇಳಲಾಗಿದೆ. ಕಮಲಾಪುರ ಪೊಲೀಸ್ ಠಾಣೆ ವ್ಯಾಫ್ತಿಯಲ್ಲಿ ಘಟನೆ ನಡೆದಿದೆ.
ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕೋಡ್ಲಿ ಗ್ರಾಮದ ಕೆರೆ ಬಳಿ ಸಿಡಿಲು ಬಡಿದು ಅನಿಲ್ ಭೋವಿ(22) ಮೃತಪಟ್ಟಿದ್ದಾರೆ. ಜೆಸಿಬಿಯಿಂದ ಕಾಮಗಾರಿ ನಡೆಸುವ ವೇಳೆ ದುರ್ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.