alex Certify ನಾಳೆಯಿಂದ ರೈಲು ಸಂಚಾರ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ರೈಲು ಸಂಚಾರ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರೈಲ್ವೇ ಇಲಾಖೆಯಿಂದ ಅನುಮತಿ ಬರುವವರೆಗೆ ರಾಜ್ಯದಲ್ಲಿ ರೈಲು ಸಂಚಾರ ಆರಂಭಿಸುವುದಿಲ್ಲ. ಕರ್ನಾಟಕದಲ್ಲಿ ನಾಳೆಯಿಂದ ರೈಲುಗಳ ಸಂಚಾರ ಇರುವುದಿಲ್ಲ ಎನ್ನಲಾಗಿದೆ.

ರಾಜ್ಯದಲ್ಲಿ ರೈಲು ಸಂಚಾರಕ್ಕೆ ಸಿದ್ಧವೆಂದು ರಾಜ್ಯ ಸರ್ಕಾರ ಹೇಳಿತ್ತು. ರಾಜ್ಯದಲ್ಲಿ ವಿಶೇಷ ರೈಲು, ಶ್ರಮಿಕ್ ರೈಲುಗಳು ಮಾತ್ರ ಸಂಚರಿಸುತ್ತವೆ. ಪ್ರಯಾಣಿಕರ ರೈಲು ಸಂಚಾರಕ್ಕೆ ಇಲಾಖೆಯಿಂದ ಅನುಮತಿ ಬರುವವರೆಗೆ ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ. ಲಾಕ್ ಡೌನ್ ಜಾರಿಯಾದಾಗಿನಿಂದ ಪ್ರಯಾಣಿಕರ ರೈಲು ಸಂಚಾರ ಸ್ಥಗಿತಗೊಂಡಿದ್ದು, ಈ ನಡುವೆ ಶ್ರಮಿಕ್ ರೈಲು ಮತ್ತು ವಿಶೇಷ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉಳಿದಂತೆ ಜೂನ್ 30 ರವರೆಗೆ ಪ್ರಯಾಣಿಕರ ರೈಲು ಸಂಚಾರ ಇರುವುದಿಲ್ಲ ಎಂದು ಹೇಳಲಾಗಿದೆ.

ಆದರೆ, ರಾಜ್ಯದಲ್ಲಿ ರೈಲು ಸಂಚಾರಕ್ಕೆ ಸಿದ್ಧವೆಂದು ರಾಜ್ಯ ಸರ್ಕಾರ ಹೇಳಿದ್ದು, ರೈಲ್ವೆ ಇಲಾಖೆಯಿಂದ ಅನುಮತಿ ಬರುವವರೆಗೆ ಪ್ರಯಾಣಿಕರ ರೈಲು ಸಂಚಾರ ಆರಂಭವಾಗಲ್ಲ ಎನ್ನಲಾಗಿದೆ.

ಇನ್ನು ಇದೇ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಸುರೇಶ್ ಅಂಗಡಿ, ರಾಜ್ಯದಲ್ಲಿ ಪ್ರಯಾಣಿಕ ರೈಲು ಸಂಚಾರದ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ರೈಲುಗಳ ಸಂಚಾರದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ, ಎಲ್ಲದರ ಕುರಿತು ಚರ್ಚಿಸಿ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...