alex Certify ಕೊರೋನಾ ನೆಗೆಟಿವ್ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿದ್ರಾ ತಬ್ಲಿಘಿಗಳು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ನೆಗೆಟಿವ್ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿದ್ರಾ ತಬ್ಲಿಘಿಗಳು…?

 ತುಮಕೂರು: ಗುಜರಾತ್ ನಿಂದ ತುಮಕೂರು ಜಿಲ್ಲೆಗೆ ಆಗಮಿಸಿದ ತಬ್ಲಿಘಿಗಳ ನೆಗೆಟಿವ್ ವರದಿ ಬಗ್ಗೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಗುಜರಾತ್ ನ ಅಹಮದಾಬಾದ್ನಿಂದ ರಾಜ್ಯಕ್ಕೆ ಆಗಮಿಸಿದ ತಬ್ಲಿಘಿಗಳ ಬಳಿ ಕೊರೋನಾ ನೆಗೆಟಿವ್ ವರದಿ ಇದೆಯೇ ಅಥವಾ ನಕಲಿ ದಾಖಲೆ ಸೃಷ್ಟಿಸಿ ರಾಜ್ಯಕ್ಕೆ ಪ್ರವೇಶಿಸಿಬಹುದೇ ಎಂಬ ಅನುಮಾನ ಮೂಡಿದೆ.

ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅಹಮದಾಬಾದ್ ಅಧಿಕಾರಿಗಳಿಗೆ ಮಾಹಿತಿ ಕೇಳಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮಾಹಿತಿ ನೀಡಲಾಗಿದ್ದು ತಪ್ಪು ಮಾಹಿತಿ ನೀಡಿದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ. ಅಹಮದಾಬಾದ್ ನಿಂದ ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗೆ ಆಗಮಿಸಿರುವ ಹಲವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು, ಅವರಲ್ಲಿ ಅನೇಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...