alex Certify ತುಮಕೂರಲ್ಲಿ ಮತ್ತೆ ಆತಂಕ ಸೃಷ್ಠಿಸಿದ್ರಾ ತಬ್ಲಿಘಿಗಳು..? ಮಸೀದಿಯಲ್ಲಿ ಉಳಿದವರ ಮಾಹಿತಿ ನೀಡಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಮಕೂರಲ್ಲಿ ಮತ್ತೆ ಆತಂಕ ಸೃಷ್ಠಿಸಿದ್ರಾ ತಬ್ಲಿಘಿಗಳು..? ಮಸೀದಿಯಲ್ಲಿ ಉಳಿದವರ ಮಾಹಿತಿ ನೀಡಲು ಸೂಚನೆ

3 ಕೊರೋನಾ ಪಾಸಿಟಿವ್ ಪ್ರಕರಣ ಕಂಡು ಬಂದಿದ್ದ ತುಮಕೂರಿನಲ್ಲಿ ತಬ್ಲಿಘಿ ಸದಸ್ಯರು ಮತ್ತೆ ಆತಂಕ ಸೃಷ್ಟಿಸಿದ್ದಾರೆ.

ತುಮಕೂರಿನ ಮಸೀದಿಗಳಲ್ಲಿ ಜಮಾತ್ ಸದಸ್ಯರು ತಂಗಿದ್ದಾರೆ. ನಿಜಾಮುದ್ದೀನ್ ಗೆ ಹೋಗಿ ಬಂದಿದ್ದ 37 ಮಂದಿ ನಂತರ ವಿವಿಧೆಡೆಯಿಂದ ಬಂದಿರುವ ಜಮಾತ್ ಸದಸ್ಯರು ತುಮಕೂರಿನ ಮಸೀದಿಗಳಲ್ಲಿ ತಂಗಿದ್ದಾರೆ ಎನ್ನಲಾಗಿದೆ.

ಜಮಾತ್ ಸದಸ್ಯರು ಮಸೀದಿಗಳಲ್ಲಿ ತಂಗಿರುವ ಬಗ್ಗೆ ಮಾಹಿತಿ ನೀಡುವಂತೆ ತುಮಕೂರು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಮನವಿ ಮಾಡಿದ್ದಾರೆ. ವಿದೇಶ, ಹೊರ ರಾಜ್ಯದಿಂದ ಬಂದವರ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ತುಮಕೂರಿನ ಜಿಲ್ಲೆಯ ಮಸೀದಿಗಳಲ್ಲಿ 10 ಮಂದಿ ಸದಸ್ಯರು ಇರುವ ಶಂಕೆ ವ್ಯಕ್ತವಾಗಿದ್ದು ಮಾಹಿತಿ ನೀಡುವಂತೆ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷರು ಕೂಡ ಮನವಿ ಮಾಡಿದ್ದಾರೆ. ಮಸೀದಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗಿದೆ.

ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಸರ್ಕಾರದೊಂದಿಗೆ ಕೈ ಜೋಡಿಸಬೇಕು. ಹೆಚ್ಚು ಕಡಿಮೆಯಾದರೆ ಮಸೀದಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಹೊಣೆಯಾಗಬೇಕಾಗುತ್ತದೆ. ಮಸೀದಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...