alex Certify BREAKING: ತನಿಖೆಯಲ್ಲಿ ಬಯಲಾಯ್ತು ಇಬ್ಬರು ಶಾಲಾ ಮಕ್ಕಳು ಸಾವನ್ನಪ್ಪಿದ ಅಪಘಾತದ ಕಾರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತನಿಖೆಯಲ್ಲಿ ಬಯಲಾಯ್ತು ಇಬ್ಬರು ಶಾಲಾ ಮಕ್ಕಳು ಸಾವನ್ನಪ್ಪಿದ ಅಪಘಾತದ ಕಾರಣ

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಸಾರಿಗೆ ಬಸ್, ಶಾಲಾ ವಾಹನ ಮುಖಾಮುಖಿ ಡಿಕ್ಕಿಯಾಗಿ ಶಾಲಾ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಈ ಅಪಘಾತಕ್ಕೆ ರಸ್ತೆ ಗುಂಡಿಯೇ ಕಾರಣ ಎನ್ನುವುದು ಬಳಕೆಗೆ ಬಂದಿದೆ.

ಗುಂಡಿ ತಪ್ಪಿಸಲು ಹೋಗಿ ಶಾಲಾ ಬಸ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿದೆ. ಕಪಗಲ್ ಬಳಿ ನಿನ್ನೆ ಸಂಭವಿಸಿದ ಅಪಘಾತದಲ್ಲಿ ಶಾಲಾ ಮಕ್ಕಳಾದ ಸಮರ್ಥ್(7), ಶ್ರೀಕಾಂತ್(12) ಮೃತಪಟ್ಟಿದ್ದರು. ರಾಯಚೂರು ಆಸ್ಪತ್ರೆಯಲ್ಲಿ 29 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಸ್ತೆ ಗುಂಡಿಯಿಂದಲೇ ಅಪಘಾತ ಸಂಭವಿಸಿದೆ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ರಾಯಚೂರು -ಸಿಂಧನೂರು -ಬೆಂಗಳೂರು ಮಾರ್ಗ ಕಲ್ಪಿಸುವ ಹೆದ್ದಾರಿ ಇದಾಗಿದ್ದು, ಸಿಂಧನೂರಿನಿಂದ ಹೈದರಾಬಾದ್ ಗೂ ಇದೇ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಕಳೆದ ಎರಡು ತಿಂಗಳಿಂದ ಇದೇ ಭಾಗದಲ್ಲಿ ಐದಕ್ಕೂ ಹೆಚ್ಚು ಅಪಘಾತ ಸಂಭವಿಸಿವೆ. ಈ ರಸ್ತೆಯಲ್ಲಿ ನೂರಾರು ಗುಂಡಿಗಳಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...