ಉಡುಪಿ ಜಿಲ್ಲೆ ಕುಂದಾಪುರದಲ್ಲಿ ಆಶಾ ಕಾರ್ಯಕರ್ತೆಗೆ ಕೊಲೆ ಬೆದರಿಕೆ ಹಾಕಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕುಂದಾಪುರ ತಾಲೂಕಿನ ಮುದ್ದುಗುಡ್ಡೆಯಲ್ಲಿ ಬೆಂಗಳೂರಿನಿಂದ ಬಂದಿರುವ ಯುವಕ ಸಂದೀಪ್ ಮೇಸ್ತ ಎಂಬಾತನಿಗೆ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ಆಶಾ ಕಾರ್ಯಕರ್ತೆ ಸೂಚನೆ ನೀಡಿದ್ದರು.
ಆದರೆ ನಿಯಮ ಉಲ್ಲಂಘಿಸಿ ಸಂದೀಪ್ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು ಇದನ್ನು ಗಮನಿಸಿದ ಆಶಾ ಖಾರ್ಯಕರ್ತೆ ಮನೆಯಲ್ಲೇ ಇರುವಂತೆ ತಿಳಿಸಿದ್ದರಿಂದ ಸಂದೀಪ್ ಮತ್ತು ಆತನ ಸ್ನೇಹಿತ ಮಹೇಶ್ ಖಾರ್ವಿ ಕೊಲೆ ಬೆದರಿಕೆ ಹಾಕಿದ್ದಾರೆ.
ಈ ಕುರಿತಾಗಿ ಆಶಾ ಕಾರ್ಯಕರ್ತೆ ಕುಂದಾಪುರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.