ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆ ನೀಡಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಮತ್ತೆ ಮಳೆಯಾಗಿದೆ.
ಬೆಳವಾಡಿ ಪ್ರದೇಶದಲ್ಲಿ ಅರ್ಧ ಗಂಟೆಗೂ ಅಧಿಕ ಕಾಲ ಭಾರೀ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಗಾಳಿಯೊಂದಿಗೆ ರಭಸದ ಮಳೆಯಾಗಿದ್ದು ರಂಗಮಂದಿರದ ಮೇಲ್ಛಾವಣಿ ಹಾರಿಹೋಗಿದೆ. ಪಕ್ಕದ ಮನೆಯ ರಂಗ ಮಂದಿರದ ಮೇಲ್ಚಾವಣಿ ಹಾರಿಬಿದ್ದು ಮನೆಗೂ ಹಾನಿಯಾಗಿದೆ. ಮನೆಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ, ಶಿಡ್ಲಘಟ್ಟ ತಾಲ್ಲೂಕಿನ ಹಲವೆಡೆ ಮಳೆಯಾಗಿದೆ. ಆಲಿಕಲ್ಲು ಸಹಿತ ಮಳೆಯಾಗಿದ್ದು ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದ ಚಿಂತಾಮಣಿಯಲ್ಲಿ ಮಳೆಯಿಂದಾಗಿ ನೀರಿನ ಸಮಸ್ಯೆ ಸ್ವಲ್ಪ ಸುಧಾರಿಸಲಿದೆ ಎಂದು ಹೇಳಲಾಗಿದೆ. ಚಿಂತಾಮಣಿಯಲ್ಲಿ ಭಾರಿ ಮಳೆಯಾದ ಕಾರಣ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಗಿದೆ.