ಬಳ್ಳಾರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರಾಜ್ಯ ಮಹಿಳಾ ಅಭಿವೃದ್ದಿ ನಿಗಮವು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಸಂಕಷ್ಟಕ್ಕೊಳಗಾದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ ಸರ್ಕಾರವು ಒದಗಿಸಿರುವ 2019-20ನೇ ಸಾಲಿನ ಪರಿಶಿಷ್ಟ ಜಾತಿ, ಪ.ಪಂಗಡ ಉಪಯೋಜನೆಯಡಿ ಬಳಕೆಯಾಗದ ಅನುದಾನದಡಿಯಲ್ಲಿ ಉದ್ಯೋಗಿನಿ, ಕಿರುಸಾಲ, ಸಮೃದ್ಧಿ ಯೋಜನೆಗಳ ಸಹಾಯಧನ ಮತ್ತು ಬ್ಯಾಂಕ್ಗಳಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 50 ವರ್ಷದ ಮಹಿಳೆಯರಾಗಿರಬೇಕು, ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಕುಟುಂಬದ ವಾರ್ಷಿಕ ಆದಾಯ 40 ಸಾವಿರ ರೂ. ಮೀರಿರಬಾರದು. ವಿಧವೆಯರು, ಸಂಕಷ್ಟಕ್ಕೊಳಗಾದ ಮಹಿಳೆಯರು, ಅಂಗವಿಕಲ ಮಹಿಳೆಯರ ಹಾಗೂ ದೇವದಾಸಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಸ್ವಯಂ ಉದ್ಯೋಗದಲ್ಲಿ ಸಾಕಷ್ಟು ಜ್ಞಾನ ಮತ್ತು ಅನುಭವ ಹೊಂದಿರಬೇಕು ಹಾಗೂ ಯೋಜನಾ ವರದಿ ಕಡ್ಡಾಯವಾಗಿ ಲಗತ್ತಿಸಬೇಕು. ಬ್ಯಾಂಕ್ನಿಂದ ಸಾಲ ನೀಡಲು ಒಪ್ಪಿದಲ್ಲಿ ಸಹಾಯಧನ ಬಿಡುಗಡೆ ಮಾಡಲಾಗುವುದು.
ನಗರಕ್ಕೆ ಉದ್ಯೋಗಿ ಯೋಜನೆಯಡಿಯಲ್ಲಿ ಪ.ಜಾತಿ-3, ಪ.ಪಂಗಡ-3 ಹಾಗೂ ಸಮೃದ್ಧಿ ಯೋಜನೆಯಡಿಯ ಪರಿಶಿಷ್ಟ ಜಾತಿ-20, ಚೇತನ ಯೋಜನೆಯಡಿ ಪ.ಜಾತಿ-8, ಪ.ಪಂಗಡಕ್ಕೆ 1 ರಂತೆ ಒಟ್ಟು 9 ಗುರಿಯನ್ನು ನಿಗಧಿಪಡಿಸಲಾಗಿದೆ.
ಅಭ್ಯರ್ಥಿಯು ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಕೈಗೊಳ್ಳುವ ಆದಾಯೋತ್ಪನ್ನ ಚಟುವಟಿಕೆಗಳ ಯೋಜನಾ ವಿವರ, ವಾಸಸ್ಥಳ ಪ್ರಮಾಣ ಪತ್ರ, ಗುರುತಿನ ಚೀಟಿ, ಆಧಾರ ಕಾರ್ಡ್, ಬ್ಯಾಂಕ್ ಪಾಸಪುಸ್ತಕ ಪ್ರತಿ ಇತರೆ ದಾಖಲಾತಿಗಳನ್ನು ಸಲ್ಲಿಸಬೇಕು. ಅರ್ಜಿಯನ್ನು ಜೂನ್ 6ರ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ದೇವಿನಗರ, ಕ್ಲಬ್ ರಸ್ತೆ, ಬಳ್ಳಾರಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ.08392-268609 ಗೆ ಸಂಪರ್ಕಿಸಬಹುದು ಎಂದು ಎಂದು ಬಳ್ಳಾರಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.