ಬೆಂಗಳೂರು: ಕಟ್ಟಡ ನಿರ್ಮಾಣ ಮೊದಲಾದ ಉದ್ಯೋಗದಲ್ಲಿ ತೊಡಗಿಕೊಂಡಿರುವ ಕಾರ್ಮಿಕರ ವೇತನ ಕಡಿತಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
ಬೆಂಗಳೂರಿನ ವಿವಿಧೆಡೆ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡಗಳ ಸಮೀಪ ತಂಗಿರುವ ಕಾರ್ಮಿಕರನ್ನು ಭೇಟಿಯಾಗಿ ಅಹವಾಲು ಆಲಿಸಿದ ಸಚಿವರು, ಕಾರ್ಮಿಕ ಇಲಾಖೆ ಅಧಿಕಾರಿಗಳು ಇತರೆ ಅಧಿಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಪ್ರತಿದಿನ ಇಂತಹ ಪ್ರದೇಶಗಳಿಗೆ ಭೇಟಿ ನೀಡಿ ಕಾರ್ಮಿಕರ ಯೋಗಕ್ಷೇಮ ವಿಚಾರಿಸಬೇಕು ಎಂದು ತಿಳಿಸಿದ್ದಾರೆ.
ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಯಾವುದೇ ಕಾರ್ಮಿಕರ ವೇತನ ಕಡಿತಕ್ಕೆ ಅವಕಾಶ ನೀಡುವುದಿಲ್ಲ. ಎಲ್ಲಾ ಕಾರ್ಮಿಕ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ.