ಬೆಂಗಳೂರು: ಗುರುವಾರದಿಂದ ಮೂರು ದಿನಗಳ ಕಾಲ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಸೂಚನೆ ನೀಡಲಾಗಿದೆ. ಮೇಲ್ಮೈ ಸುಳಿಗಾಳಿ ಇರುವುದರಿಂದ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇನ್ನು ಮೂರು ದಿನಗಳ ಕಾಲ ಮೇಲ್ಮೈ ಸುಳಿಗಾಳಿ ಪರಿಣಾಮ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿ ಲಾಕ್ ಡೌನ್ ನಿಂದಾಗಿ ಮೊದಲೇ ಸಂಕಷ್ಟದಲ್ಲಿದ್ದ ಜನ ತತ್ತರಿಸಿ ಹೋಗಿದ್ದಾರೆ. ಇದೇ ವೇಳೆ ಇನ್ನು ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹೇಳಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.