alex Certify ಹೈದರಾಬಾದಿನಲ್ಲಿದ್ದರೂ ಸಹ ಪ್ರಧಾನಿ ಮೋದಿ ಸ್ವಾಗತಕ್ಕೆ KCR ಗೈರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈದರಾಬಾದಿನಲ್ಲಿದ್ದರೂ ಸಹ ಪ್ರಧಾನಿ ಮೋದಿ ಸ್ವಾಗತಕ್ಕೆ KCR ಗೈರು

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್, ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ತೆರಳದೆ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ. ಇದು ಈಗ ಮತ್ತೊಮ್ಮೆ ಮುಂದುವರೆದಿದೆ.

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಬಾರಿ ಹೈದರಾಬಾದಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚಂದ್ರಶೇಖರರಾವ್ ಬೆಂಗಳೂರಿಗೆ ಬಂದು ಜೆಡಿಎಸ್ ವರಿಷ್ಠರನ್ನು ಭೇಟಿಯಾಗಿದ್ದರು. ಆದರೆ ಶುಕ್ರವಾರದಂದು ನರೇಂದ್ರ ಮೋದಿಯವರು ಮತ್ತೆ ಹೈದರಾಬಾದಿಗೆ ಭೇಟಿ ನೀಡಿದ ವೇಳೆ ಅಲ್ಲಿಯೇ ಇದ್ದರೂ ಸಹ ವಿಮಾನ ನಿಲ್ದಾಣಕ್ಕೆ ತೆರಳದೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಯನ್ನು ಕಳುಹಿಸಿಕೊಟ್ಟಿದ್ದಾರೆ.

ಆದರೆ ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸ್ವಾಗತಿಸಲು ಬೇಗಂ ಪೇಟೆ ವಿಮಾನ ನಿಲ್ದಾಣಕ್ಕೆ ಸ್ವತಃ ತೆರಳಿದ್ದ ಚಂದ್ರಶೇಖರರಾವ್, ಕೆಲ ಗಂಟೆಗಳ ನಂತರ ಆಗಮಿಸಿದ ಪ್ರಧಾನಿ ಮೋದಿ ಅವರ ಸ್ವಾಗತಕ್ಕೆ ತೆರಳದಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...