alex Certify BIG NEWS: ತೆಲಂಗಾಣ ಸಚಿವರ ಆಪ್ತರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತೆಲಂಗಾಣ ಸಚಿವರ ಆಪ್ತರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ

ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯ ಸಚಿವ ಗಂಗೂಲ ಕಮಲಾಕರ್ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು ಹೈದರಾಬಾದ್ ನಲ್ಲಿ ಜಾರಿ ನಿರ್ದೇಶನಾಲಯವು ಶೋಧಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಸಚಿವ ಗಂಗೂಲ ಕಮಲಾಕರ್ ಅವರು ಕುಟುಂಬ ಸಮೇತ ದುಬೈನಲ್ಲಿದ್ದಾರೆ. ಕಮಲಾಕರ್ ಅವರು ಹಿಂದುಳಿದ ವರ್ಗಗಳ ಕಲ್ಯಾಣ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದಾರೆ.

ಸಚಿವರ ವಿರುದ್ಧ ಜಾರಿ ನಿರ್ದೇಶನಾಲಯ ಕ್ರಮವು ಬಿಜೆಪಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನೇತೃತ್ವದ ಟಿ ಆರ್ ಎಸ್ ನಡುವಿನ ಹೋರಾಟವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಈಗಾಗಲೇ ಬಿಜೆಪಿಯೇತರ ರಾಜ್ಯಗಳು ನರೇಂದ್ರ ಮೋದಿ ಸರ್ಕಾರವು ಕಿರುಕುಳ ನೀಡಲು ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿವೆ.

ತಮ್ಮ ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ ಎಂದು ಮರುನಾಮಕರಣ ಮಾಡಿರುವ ಕೆಸಿಆರ್ ಅವರ ಪಕ್ಷವು ಮುನುಗೋಡೆಯಲ್ಲಿ ಉಪಚುನಾವಣೆಯಲ್ಲಿ ಗೆದ್ದು ಒಂದು ವಾರದೊಳಗೆ ಇಡಿ ದಾಳಿ ನಡೆದಿದೆ.

ಕೇಂದ್ರದ ಬಿಜೆಪಿ ಪಕ್ಷವು ಪಕ್ಷವನ್ನು ಬದಲಾಯಿಸಲು ನಾಲ್ವರು ಟಿ ಆರ್ ‌ಎಸ್ ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸಿದೆ ಎಂಬ ಆರೋಪದ ಮೇಲೆ ಕೆಸಿಆರ್ ಅವರ ಪಕ್ಷ ಮತ್ತು ಬಿಜೆಪಿ ನಡುವೆ ಸಮರ ನಡೆಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...