alex Certify ಸಿಇಟಿ ಅಭ್ಯರ್ಥಿಗಳಿಗೆ ಕೆಇಎ ಮುಖ್ಯ ಮಾಹಿತಿ: ಜು. 4ರಿಂದ ದಾಖಲಾತಿ ಪರಿಶೀಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ಅಭ್ಯರ್ಥಿಗಳಿಗೆ ಕೆಇಎ ಮುಖ್ಯ ಮಾಹಿತಿ: ಜು. 4ರಿಂದ ದಾಖಲಾತಿ ಪರಿಶೀಲನೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಮಾಹಿತಿಯನ್ನು ಪ್ರಕಟಿಸಿದ್ದು, ತಪ್ಪು ಕಂಡುಬಂದಿದ್ದರೆ ಅಂತಹ ಅಭ್ಯರ್ಥಿಗಳು ಜುಲೈ 4 ರಿಂದ 6ರ ಒಳಗೆ ಮಲ್ಲೇಶ್ವರದ ಕಚೇರಿಗೆ ಖುದ್ದು ಹಾಜರಾಗಬೇಕು ಎಂದು ಕೆಇಎ ಹೇಳಿದೆ.

ಒಂದು ಲಕ್ಷಕ್ಕಿಂತ ಒಳಗಿನ ರ್ಯಾಂಕಿಂಗ್‌ನ ವಿದ್ಯಾರ್ಥಿಗಳು ಜುಲೈ 4 ರಂದು 1.8 ಲಕ್ಷಕ್ಕಿಂತ ಒಳಗಿನವರು ಜುಲೈ 5 ರಂದು ಹಾಗೂ 1.8 ಲಕ್ಷಕ್ಕಿಂತ ಮೇಲ್ಪಟ್ಟು ರ್ಯಾಂಕ್‌ ಪಡೆದವರು ಜುಲೈ 6 ರಂದು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ ಹಾಜರಾಗಬೇಕು. ಸಿಇಟಿಗೆ ಸಲ್ಲಿಸಿದ್ದ ಅರ್ಜಿ ಪ್ರತಿ, ಪ್ರವೇಶ ಪತ್ರ ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳು ಮತ್ತು ಎಲ್ಲಾ ಪ್ರಮಾಣ ಪತ್ರಗಳ ಎರಡು ಸೆಟ್‌ ಜೆರಾಕ್ಸ್‌ ಪ್ರತಿಗಳೊಂದಿಗೆ ಬರಬೇಕು. ಎಲ್ಲ ಮಾಹಿತಿ ಸರಿ ಇರುವವರು ಕೆಇಎ ಕಚೇರಿಗೆ ಭೇಟಿ ನೀಡುವ ಅಗತ್ಯವಿಲ್ಲ ಎಂದು ಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...