alex Certify ನಿಮ್ಮ ಅಂಗಡಿಗಳಲ್ಲಿ ಎರಡು ಪಿಸ್ತೂಲ್​ ಇಟ್ಟುಕೊಳ್ಳಿ ಎಂದ ಬಿಜೆಪಿ ಶಾಸಕ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ಅಂಗಡಿಗಳಲ್ಲಿ ಎರಡು ಪಿಸ್ತೂಲ್​ ಇಟ್ಟುಕೊಳ್ಳಿ ಎಂದ ಬಿಜೆಪಿ ಶಾಸಕ…!

ಉದಯಪುರ ಟೈಲರ್​ ಹತ್ಯೆ ಪ್ರಕರಣ ಬೆಚ್ಚಿಬೀಳಿಸುವಂತಿತ್ತು. ಈ ಘಟನೆ ಜನರ ಮನಸ್ಸಿನಲ್ಲಿ ಇನ್ನೂ ಹಸಿಯಾಗಿದೆ. ಈ ನಡುವೆಯೇ ಬಿಜೆಪಿ ಶಾಸಕ ಶಾಕಿಂಗ್​ ಸ್ಟೇಟ್​ಮೆಂಟ್​ ನೀಡಿದ್ದಾರೆ.

ಉತ್ತರ ಪ್ರದೇಶದ ಮುಜಾಫರ್​ ನಗರದ ಖತೌಲಿ ಕ್ಷೇತ್ರದ ಬಿಜೆಪಿ ಶಾಸಕ ವಿಕ್ರಮ್​ ಸೈನಿ ಅವರು ನಗರದ ವ್ಯಾಪಾರಿಗಳಿಗೆ ಸುರಕ್ಷತಾ ಸಲಹೆಗಳನ್ನು ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ವಿವಾದ ಸೃಷ್ಟಿಸಿದೆ.

ಕಾರ್ಯಕ್ರಮವೊಂದರಲ್ಲಿ ಅವರು ಅಂಗಡಿಯವರು ಮತ್ತು ವ್ಯಾಪಾರಿಗಳೊಂದಿಗೆ ಸಂವಾದ ನಡೆಸಿದರು. ಜನರು ತಮ್ಮ ತಮ್ಮ ಅಂಗಡಿಗಳಲ್ಲಿ ಕಲ್ಲು, ಸಲಿಕೆ ಮತ್ತು ಪಿಸ್ತೂಲ್​ಗಳನ್ನು ಇಟ್ಟುಕೊಳ್ಳಬೇಕು ಎಂದು ಶಾಸಕ ಸೈನಿ ಹೇಳುತ್ತಿರುವುದು ವಿಡಿಯೊದಲ್ಲಿದೆ.

ಪೊಲೀಸರು ಎಷ್ಟು ದಿನ ಈ ಭದ್ರತಾ ಕೆಲಸ ಮಾಡುತ್ತಾರೆ ? ಪೊಲೀಸರು ಬರುವಷ್ಟರಲ್ಲಿ ನಿಮ್ಮ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿರುತ್ತದೆ ಎಂದು ಸೈನಿ ವ್ಯಾಪಾರಿಗಳನ್ನು ಎಚ್ಚರಿಸುತ್ತಾರೆ.

ಶನಿವಾರ ಜನಸತ್​ ತಹಸಿಲ್​ ಪ್ರದೇಶದ ವಾಜಿದ್​ಪುರ ಕವಾಲಿ ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ವಿಡಿಯೊವನ್ನು ಚಿತ್ರೀಕರಿಸಲಾಗಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದಿಂದ ಗೆಲುವು ಸಾಧಿಸಿದ್ದಕ್ಕಾಗಿ ಕೇಂದ್ರ ರಾಜ್ಯ ಸಚಿವ ಸಂಜೀವ್​ ಬಲ್ಯಾನ್​ ಮತ್ತು ಬಿಜೆಪಿ ಶಾಸಕ ವಿಕ್ರಮ್​ ಸೈನಿ ಅವರನ್ನು ಸನ್ಮಾನಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಮಾರಂಭದಲ್ಲಿ ಶಾಸಕ ಸೈನಿ ಭಾಷಣ ಮಾಡಿದ್ದು, ಅದನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಮಾಡಿದ್ದಾರೆ.

ಪ್ರವಾದಿ ವಿವಾದದ ಬಗ್ಗೆಯೂ ಮಾತನಾಡುತ್ತಾ, “ನೂಪುರ್​ ಶರ್ಮಾ ಮಾತನಾಡುವುದು ಅವರ ಪ್ರಜಾಸತ್ತಾತ್ಮಕ ಹಕ್ಕು, ಹಿಂದೂ ದೇವತೆಗಳ ವಿರುದ್ಧ ಮಾತನಾಡಲು ಏನು ಹಕ್ಕಿದೆ, ಆದರೆ ಯಾರಾದರೂ ಅವರ ವಿರುದ್ಧ ಏನಾದರೂ ಹೇಳಿದರೆ ತಲೆ ಕತ್ತರಿಸಲಾಗುತ್ತದೆ ಎಂದು ಅವರು ಹೇಳುತ್ತಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...