alex Certify ಗಡಿ ಭಾಗದಲ್ಲಿ ಆನೆ ದಾಳಿಯಿಂದಾದ ಹಾನಿಗೆ ಕೇರಳದಿಂದ ಪರಿಹಾರ ಪಡೆಯಬಹುದೇ: ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಸಿಎಂ ಸದಾನಂದ ಗೌಡ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಡಿ ಭಾಗದಲ್ಲಿ ಆನೆ ದಾಳಿಯಿಂದಾದ ಹಾನಿಗೆ ಕೇರಳದಿಂದ ಪರಿಹಾರ ಪಡೆಯಬಹುದೇ: ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಸಿಎಂ ಸದಾನಂದ ಗೌಡ ಪ್ರಶ್ನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕೇರಳ ಗಡಿಭಾಗದಲ್ಲಿ ಅನೇಕ ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡುತ್ತಿವೆ. ಇದಕ್ಕೆ ಕೇರಳ ಸರ್ಕಾರದಿಂದ ಪರಿಹಾರ ತರಿಸಬಹುದೇ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಸುಳ್ಯ ತಾಲೂಕಿನ ಕೇರಳ ಗಡಿಭಾಗದಲ್ಲಿ ಆನೆಗಳ ನಿರಂತರ ದಾಳಿಯಿಂದ ಸಾವಿರಾರು ಎತರೆ ಕೃಷಿ ಬೆಳೆ ನಾಶವಾಗುತ್ತಿದೆ. ಕೇರಳ ಭಾಗದಿಂದ ಈ ಆನೆಗಳು ಬರುತ್ತವೆ. ಪರಿಹಾರವನ್ನು ಕೇರಳ ಸರ್ಕಾರದಿಂದ ತರಿಸಿಕೊಡಲು ನಿಮ್ಮ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಅವರಿಗೆ ಪತ್ರ ಬರೆಯಬಹುದೇ ಎಂದು ಪ್ರಶ್ನಿಸಿದ್ದಾರೆ.

ಕೇರಳದ ವಯನಾಡಿನಲ್ಲಿ ಆನೆ ತುಳಿತದಿಂದ ಮೃತಪಟ್ಟ ವ್ಯಕ್ತಿಗೆ ಕರ್ನಾಟಕದ ತೆರಿಗೆ ಹಣದಿಂದ ಪರಿಹಾರ ನೀಡುವುದು ಎಷ್ಟರಮಟ್ಟಿಗೆ ಸರಿ ಎಂದು ಸದಾನಂದ ಗೌಡ ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...