alex Certify Big News: ಶಬರಿಮಲೆ ಯಾತ್ರೆ ಕೈಗೊಳ್ಳುವ ಮಕ್ಕಳಿಗೆ ಕಡ್ಡಾಯ ಆರ್​ಟಿ-ಪಿಸಿಆರ್​ ಪರೀಕ್ಷೆಯಿಂದ ವಿನಾಯ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಶಬರಿಮಲೆ ಯಾತ್ರೆ ಕೈಗೊಳ್ಳುವ ಮಕ್ಕಳಿಗೆ ಕಡ್ಡಾಯ ಆರ್​ಟಿ-ಪಿಸಿಆರ್​ ಪರೀಕ್ಷೆಯಿಂದ ವಿನಾಯ್ತಿ

ಶಬರಿಮಲೆ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮಕ್ಕಳು ಕಡ್ಡಾಯ ಆರ್​ಟಿ ಪಿಸಿಆರ್​ ಪರೀಕ್ಷೆಗೆ ಒಳಗಾಗಬೇಕಿಲ್ಲ ಎಂದು ಕೇರಳ ಸರ್ಕಾರ ಘೋಷಣೆ ಮಾಡಿದೆ.

ಶುಕ್ರವಾರ ಈ ಸಂಬಂಧ ಆದೇಶವನ್ನು ಹೊರಡಿಸಿರುವ ಕೇರಳ ಸರ್ಕಾರವು ಚಿಕ್ಕ ಭಕ್ತರೊಂದಿಗೆ ಆಗಮಿಸುವ ಪೋಷಕರು ಹಾಗೂ ವಯಸ್ಕರು ಸ್ಯಾನಿಟೈಸರ್​ ಹಾಗೂ ಮಾಸ್ಕ್​ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಜೊತೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ.

ಶಬರಿಮಲೆಗೆ ನಿಯೋಜಿಸಲಾದ ಯಾತ್ರಾರ್ಥಿಗಳು ಹಾಗೂ ಸಿಬ್ಬಂದಿ ಕೊರೊನಾ ಲಸಿಕೆಯ ಪ್ರಮಾಣ ಪತ್ರ ಅಥವಾ ಆರ್​ಟಿ ಪಿಸಿಆರ್​ ನೆಗೆಟಿವ್​ ವರದಿಯನ್ನು ಹೊಂದಿರೋದು ಕಡ್ಡಾಯವಾಗಿದೆ.

ಆರ್​ಟಿ ಪಿಸಿಆರ್​ ಪರೀಕ್ಷೆಯಿಲ್ಲದೇ ಮಕ್ಕಳಿಗೆ ಶಬರಿಮಲೆ ಯಾತ್ರೆಗೆ ಅನುಮತಿ ನೀಡಲಾಗಿದೆ ಎಂದು ಹೇಳಲು ಸರ್ಕಾರಕ್ಕೆ ಸಂತೋಷವಾಗಿದೆ. ಮಕ್ಕಳೊಂದಿಗೆ ಬರುವ ಪೋಷಕರು ಸೋಪ್​ ಅಥವಾ ಸ್ಯಾನಿಟೈಸರ್​, ಮಾಸ್ಕ್​ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ. ಮಕ್ಕಳ ಆರೋಗ್ಯ ಸಮಸ್ಯೆಗಳಿಗೆ ಪೋಷಕರೇ ಜವಾಬ್ದಾರಿ ಎಂದು ಆದೇಶದಲ್ಲಿ ಹೇಳಲಾಗಿದೆ.

— ANI (@ANI) November 27, 2021

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...