alex Certify ‘ವಿಶ್ವಕಪ್’ ಆರಂಭಕ್ಕೂ ಮುನ್ನ ಆಘಾತಕಾರಿ ಘಟನೆ; ಧರ್ಮಶಾಲಾದಲ್ಲಿ ಖಲಿಸ್ತಾನ್ ಪರ ಘೋಷಣೆ ಬರೆದ ಕಿಡಿಗೇಡಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವಿಶ್ವಕಪ್’ ಆರಂಭಕ್ಕೂ ಮುನ್ನ ಆಘಾತಕಾರಿ ಘಟನೆ; ಧರ್ಮಶಾಲಾದಲ್ಲಿ ಖಲಿಸ್ತಾನ್ ಪರ ಘೋಷಣೆ ಬರೆದ ಕಿಡಿಗೇಡಿಗಳು

'Khalistan Zindabad' slogans appear in Dharamsala ahead of World Cup matches

ನಾಳೆಯಿಂದ ಏಕದಿನ ಕ್ರಿಕೆಟ್ ವಿಶ್ವ ಕಪ್ ಪಂದ್ಯಾವಳಿಗಳು ಆರಂಭವಾಗಲಿದ್ದು, ಅದಕ್ಕೂ ಮುನ್ನ ಅಂದರೆ ಮಂಗಳವಾರ ರಾತ್ರಿ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಆಘಾತಕಾರಿ ಘಟನೆ ನಡೆದಿದೆ.

ಕೆಲ ಕಿಡಿಗೇಡಿಗಳು, ಧರ್ಮಶಾಲಾದ ಜಲ ಶಕ್ತಿ ಇಲಾಖೆಯ ಕಚೇರಿ ಕಟ್ಟಡದ ಮೇಲೆ ‘ಖಲಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಬರೆದಿದ್ದು, ಬುಧವಾರ ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ವ್ಯಾಪಕ ತನಿಖೆ ಆರಂಭಿಸಿದ್ದಾರೆ.

ಧರ್ಮಶಾಲಾದಲ್ಲಿ ಏಕದಿನ ವಿಶ್ವಕಪ್ ಕ್ರಿಕೆಟ್ ನ ಐದು ಪಂದ್ಯಗಳನ್ನು ನಡೆಸಲು ನಿಗದಿಯಾಗಿದ್ದು, ಇದರ ಮಧ್ಯೆ ನಡೆದಿರುವ ಈ ಬೆಳವಣಿಗೆ ಅಧಿಕಾರಿಗಳಿಗೆ ಆತಂಕ ತಂದಿದೆ. ಈ ಹಿನ್ನಲೆಯಲ್ಲಿ ಸಿಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...