alex Certify ಪಂಚ ರಾಜ್ಯ ಚುನಾವಣೆ ಫಲಿತಾಂಶ: ಡಿ. 6 ರಂದು ದೆಹಲಿಯಲ್ಲಿ I.N.D.A.I. ಮೈತ್ರಿಕೂಟದ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚ ರಾಜ್ಯ ಚುನಾವಣೆ ಫಲಿತಾಂಶ: ಡಿ. 6 ರಂದು ದೆಹಲಿಯಲ್ಲಿ I.N.D.A.I. ಮೈತ್ರಿಕೂಟದ ಮಹತ್ವದ ಸಭೆ

ನವದೆಹಲಿ: 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಇಂದು ಮಿಜೋರಾಂ ರಾಜ್ಯದ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಇದರ ಬೆನ್ನಲ್ಲೇ ಡಿಸೆಂಬರ್ 6ರಂದು ದೆಹಲಿಯಲ್ಲಿ ‘ಇಂಡಿಯಾ’(I.N.D.A.I.) ಮೈತ್ರಿಕೂಟದ ನಾಯಕರು ಸಭೆ ನಡೆಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೈತ್ರಿಕೂಟದ ಎಲ್ಲಾ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ, ತೆಲಂಗಾಣ, ಮಿಜೋರಾಂ ಚುನಾವಣಾ ಫಲಿತಾಂಶ ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿಕ್ಸೂಚಿ ಆಗಿರುವುದರಿಂದ ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಮೈತ್ರಿಕೂಟದ ನೇತೃತ್ವವನ್ನು ನಿತೀಶ್ ಕುಮಾರ್ ವಹಿಸಿಕೊಳ್ಳಬೇಕೆಂಬ ಅಭಿಪ್ರಾಯ ಕೇಳಿ ಬಂದಿದ್ದು, ಈ ಕುರಿತಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...