alex Certify BIG NEWS: ಏರ್ ಪೋರ್ಟ್ ಸುತ್ತಮುತ್ತ ದಟ್ಟ ಮಂಜು: ಕೆಐಎಯಲ್ಲಿ 34 ವಿಮಾನ ಹಾರಾಟದಲ್ಲಿ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏರ್ ಪೋರ್ಟ್ ಸುತ್ತಮುತ್ತ ದಟ್ಟ ಮಂಜು: ಕೆಐಎಯಲ್ಲಿ 34 ವಿಮಾನ ಹಾರಾಟದಲ್ಲಿ ವ್ಯತ್ಯಯ

ಬೆಂಗಳೂರು: ಹವಾಮಾನ ವೈಫರಿತ್ಯದಿಂದಾಗಿ ಬೆಂಗಳೂರಿನ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವುಂಟಾಗಿದೆ.

ದಟ್ಟವಾದ ಮಂಜು, ಮೋಡಕವಿದ ವಾತಾವರಣದಿಂದಾಗಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ಸುಮಾರು 34 ವಿಮಾನಗಳ ಹಾರಾಟ ತಡವಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ದಟ್ಟ ಮಂಜು ಕವಿದಿರುವ ಹಿನ್ನೆಲೆಯಲ್ಲಿ ಕಳೆದ ಎರಡು ಗಂಟೆಗೂ ಹೆಚ್ಚು ಕಾಲದಿಂದ ಯಾವುದೇ ವಿಮಾನ ಟೇಕ್ ಆಫ್ ಆಗಿಲ್ಲ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ .

ಮಂಜು ಮುಸುಕಿರುವ ಹಿನ್ನೆಲೆಯಲ್ಲಿ ರನ್ ವೇ ಸರಿಯಾಗಿ ಕಾಣುತ್ತಿಲ್ಲ. ಹವಾಮಾನ ವೈಫರಿತ್ಯ ಕಾರಣಕ್ಕೆ 34 ವಿಮಾನ ಹಾರಾಟ ವಿಳಂಬವಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...