alex Certify ಬೋರ್ವೆಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಮಗು ಮೃತದೇಹ ಹೊರ ತೆಗೆದ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೋರ್ವೆಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಮಗು ಮೃತದೇಹ ಹೊರ ತೆಗೆದ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಆಲಖನೂರ ಗ್ರಾಮದ ಬಳಿ ಬೋರ್ವೆಲ್ ಗೆ ಬಿದ್ದು ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ.

ಸಿದ್ದಪ್ಪ -ರಾಜಶ್ರೀ ದಂಪತಿಯ ಎರಡೂವರೆ ವರ್ಷದ ಮಗ ಶರತ್ ಸೆ. 17 ರಂದು ಸಂಜೆ ಆಟವಾಡುತ್ತಿದ್ದ ಸಂದರ್ಭದಲ್ಲಿ ನಾಪತ್ತೆಯಾಗಿದ್ದ. ಶರತ್ ಬೋರ್ವೆಲ್ ಗೆ ಬಿದ್ದ ಮಾಹಿತಿ ಸೆ. 18 ರಂದು ಸಂಜೆ ಗೊತ್ತಾಗಿದ್ದು, ಮಾಹಿತಿ ತಿಳಿದ ಕೂಡಲೇ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಬೋರ್ವೆಲ್ ಗೆ ಬಿದ್ದಿರುವ ಬಾಲಕ ಮೃತಪಟ್ಟಿರುವುದು ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದೆ. ಮೃತದೇಹ ತೆಗೆದ ಸಂದರ್ಭದಲ್ಲಿ ಪೊಲೀಸರಿಗೆ ಅನುಮಾನ ಬಂದಿದ್ದು, ಆತನ ತಂದೆ ಸಿದ್ದಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.

ಎರಡುವರೆ ವರ್ಷದ ಕಂದನ ಕತ್ತು ಹಿಸುಕಿ ಕೊಲೆ ಮಾಡಿ ಕಾಲಿಗೆ ಹಗ್ಗ ಕಟ್ಟಿ ಬೋರ್ವೆಲ್ ಗೆ ಇಳಿಬಿಟ್ಟಿದ್ದಾನೆ. ಬಳಿಕ ಕಿಡ್ನಾಪ್ ದೂರು ದಾಖಲಿಸಿದ್ದಾನೆ. ಕುಟುಂಬದವರೊಂದಿಗೆ ಸೇರಿ ಹುಡುಕಾಟ ನಡೆಸಿದ್ದಾನೆ. ಪೊಲೀಸರು ಸಿದ್ದಪ್ಪನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ತಾಯಿ ಹಾಗೂ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...