alex Certify ಅ.23 ರಿಂದ 3 ದಿನ ಅದ್ಧೂರಿ `ಕಿತ್ತೂರು ಉತ್ಸವ’ : ಸಚಿವ ಸತೀಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅ.23 ರಿಂದ 3 ದಿನ ಅದ್ಧೂರಿ `ಕಿತ್ತೂರು ಉತ್ಸವ’ : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : “ಕಿತ್ತೂರು ಉತ್ಸವವನ್ನು ಈ ಬಾರಿ ಕೂಡ ಅ.23 ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕನಿಷ್ಠ ಮೂರು ಕೋಟಿ ರೂಪಾಯಿ‌ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು” ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ ಬುಧವಾರ(ಅ.4)  ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೂರು ದಿನಗಳ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಕನಿಷ್ಠ ಮೂರು ಕೋಟಿ ರೂಪಾಯಿ ಅನುದಾನದ ಅಗತ್ಯವಿದೆ. ಇದಕ್ಕಾಗಿ ಪ್ರಯತ್ನಿಸಲಾಗುವುದು. ಈಗಾಗಲೇ ಐದು ಕೋಟಿ ರೂಪಾಯಿ ನೀಡುವಂತೆ ಪ್ರಸ್ತಾವನೆ ಕಳಿಸಲಾಗಿದೆ.

ಲೋಕೋಪಯೋಗಿ ಇಲಾಖೆಯಿಂದ ಐದು ಕೋಟಿ ಖರ್ಚು:

ಲೋಕೋಪಯೋಗಿ ಇಲಾಖೆಯಿಂದ ಮುಂದಿನ ಉತ್ಸವದ ವೇಳೆಗೆ ಕನಿಷ್ಠ ಐದು ಕೋಟಿ ರೂಪಾಯಿ ಅನುದಾನ‌ವನ್ನು ಕಿತ್ತೂರು ಪಟ್ಟಣದಲ್ಲಿ ಅಭಿವೃದ್ಧಿಗಾಗಿ ಖರ್ಚು ಮಾಡಲಾಗುವುದು. ಈ ಹಣದಲ್ಲಿ ವೀರ ಹೋರಾಟಗಾರರ ಭಾವಚಿತ್ರಗಳ ಅನಾವರಣ, ಶೌಚಾಲಯ ನಿರ್ಮಾಣ ಸೇರಿದಂತೆ ವಿವಿಧ ರೀತಿಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಸಚಿವರಾದ ಸತೀಶ್ ಜಾರಕಿಹೊಳಿ ಅವರು ಘೋಷಿಸಿದರು.

ಕಿತ್ತೂರು ಉತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲಾಗುವುದು. ದಸರಾ ಮಾದರಿಯಲ್ಲಿ ಉತ್ಸವ ಆಗಬೇಕು ಎಂಬುದು ಎಲ್ಲರ ಆಶಯವಾಗಿದೆ. ಕಿತ್ತೂರು ಇತಿಹಾಸದ ಮೆರಗು ಸಾರುವಂತಹ ಛಾಯಾಚಿತ್ರಗಳ ಪ್ರದರ್ಶನವನ್ನು ಮುಂದಿನ‌ ವರ್ಷದಿಂದ ಆರಂಭಿಸಲಾಗುವುದು. ಸ್ಥಳೀಯ ಕಲಾವಿದರಿಗೆ ಹಾಗೂ ನಿರೂಪಕರಿಗೆ ಪ್ರಾಮುಖ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

50 ಶೌಚಾಲಯಗಳ ನಿರ್ಮಾಣ- ಕೆರೆ ಅಭಿವೃದ್ಧಿ ಭರವಸೆ:

ಕಿತ್ತೂರು ಪ್ರವಾಸಿ ತಾಣವಾಗಿರುವುದರಿಂದ ಕುಡಿಯುವ ನೀರು ಮತ್ತು ಶೌಚಾಲಯಗಳನ್ನು ಲೋಕೋಪಯೋಗಿ ಇಲಾಖೆಯ ವತಿಯಿಂದ 50 ಶೌಚಾಲಯಗಳನ್ನು ನಿರ್ಮಿಸಿಕೊಡಲಾಗುವುದು. ಇದಕ್ಕಾಗಿ ಪಟ್ಟಣ ಪಂಚಾಯತಿ ಮತ್ತು ಸ್ಥಳೀಯರು ಸೂಕ್ತ ಜಾಗೆಯನ್ನು ಒದಗಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಐತಿಹಾಸಿಕ ಪ್ರಾಮುಖ್ಯತೆ ಇರುವ ರಣಗಟ್ಟಿ ಕೆರೆ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು. ಅರ್ಹ ಹಾಗೂ ಪ್ರತಿಭಾವಂತ ಕಲಾವಿದರಿಗೆ ಹಾಗೂ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಉತ್ಸವಕ್ಕೆ ಇನ್ನಷ್ಟು ಮೆರುಗು ತರುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಕೆಲಸವನ್ನು ಮಾಡೋಣ ಎಂದು ಹೇಳಿದರು.

ಕಿತ್ತೂರು ಸಮಗ್ರ ಅಭಿವೃದ್ಧಿಗೆ ಯೋಜನೆ ಅಗತ್ಯ:

ಕಿತ್ತೂರು ಅಭಿವೃದ್ಧಿಗೆ ಸಾಕಷ್ಟು ಅನುದಾನ ಖರ್ಚು ಮಾಡಲಾಗಿದೆ. ಆದಾಗ್ಯೂ ನಿರೀಕ್ಷಿತ ಸುಧಾರಣೆ ಕಂಡಿಲ್ಲ. ಆದ್ದರಿಂದ ಸಮಗ್ರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ನಿರ್ದಿಷ್ಟ ಯೋಜನೆಯನ್ನು ರೂಪಿಸುವ ಅಗತ್ಯವಿದೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.

ಚೆನ್ನಮ್ಮನ ಜನ್ಮಸ್ಥಳ ಖಾಸಗಿಯವರ ಜಾಗೆ ಆಗಿರುವುದರಿಂದ ಅಭಿವೃದ್ಧಿಗೆ ಸ್ವಲ್ಪ ಹಿನ್ನಡೆಯಾಗಿದೆ. ಆದ್ದರಿಂದ ಚೆನ್ನಮ್ಮನ ಕೋಟೆ ಹಾಗೂ ಜನ್ಮಸ್ಥಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಕಳೆದ 25 ವರ್ಷಗಳಿಂದ ಉತ್ಸವವನ್ನು ಆಚರಿಸಲಾಗುತ್ತಿದೆ. ಪ್ರತಿಬಾರಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಲಹೆಗಳು ಪಾಲನೆಯಾಗಬೇಕು ಎಂದು ಹೇಳಿದರು.

ಕೋಟೆ ಆವರಣದಲ್ಲಿ ಧ್ವನಿಬೆಳಕು ಕಾರ್ಯಕ್ರಮ:

ಸಭೆಯಲ್ಲಿ ಮಾತನಾಡಿದ ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ, ಕೋಟೆಯ ಆವರಣದಲ್ಲಿ ಮಾಹಿತಿ ಫಲಕಗಳ ಅಳವಡಿಕೆ ಮಾಡುವುದರ ಜತೆಗೆ ಧ್ವನಿಬೆಳಕು ಕಾರ್ಯಕ್ರಮವನ್ನು ವಾರದಲ್ಲಿ ಕನಿಷ್ಠ ಎರಡು ಬಾರಿ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಟ್ಟಣದ ಪ್ರವೇಶ ಮಾರ್ಗಗಳಲ್ಲಿ ದೊಡ್ಡದಾದ ಫಲಕಗಳನ್ನು ಅಳವಡಿಸಲು ಈಗಾಗಲೇ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೊರಗಿನವರು ಮತ್ತು ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಬಾಬಾಸಾಹೇಬ್ ಪಾಟೀಲ ಅವರು ಭರವಸೆಯನ್ನು ನೀಡಿದರು.

ಐದು ಕೋಟಿ ಅನುದಾನದ ಪ್ರಸ್ತಾವನೆ:

ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಐದು ಕೋಟಿ ರೂಪಾಯಿ ಅನುದಾನ ಕೋರಿ ಪ್ರಸ್ತಾವನೆ ಸರಕಾರಕ್ಕೆ ಕಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಉತ್ಸವದ ಸಿದ್ಧತೆಗಾಗಿ ಈಗಾಗಲೇ ಸಾರ್ವಜನಿಕರು ಹಾಗೂ ಅಧಿಕಾರಿಗಳನ್ನು ಒಳಗೊಂಡ ಹದಿನಾರು ಉಪ ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲ ಸಮಿತಿಗಳು ಕಾರ್ಯಪ್ರವೃತ್ತವಾಗಿವೆ.

ಕಳೆದ ಬಾರಿಯಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಸಂಕಿರಣ, ಕ್ರೀಡೆ, ಕುಸ್ತಿ, ಸೈಕ್ಲಿಂಗ್, ದೋಣಿವಿಹಾರ ಸೇರಿದಂತೆ ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಇದಲ್ಲದೇ ಸಾರ್ವಜನಿಕರ ಸಲಹೆಗಳನ್ನು ಆಧರಿಸಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಸಾನಿಧ್ಯ ವಹಿಸಿದ್ದ ಚನ್ನಮ್ಮನ ಕಿತ್ತೂರಿನ ರಾಜಗುರು ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲರೂ ಸಹಕರಿಸಬೇಕು ಎಂದರು. ಕಿತ್ತೂರು ಕೋಟೆಯ ಗೋಡೆಯ ನಿರ್ಮಾಣಕ್ಕೆ ಕ್ರಮ‌ ಕೈಗೊಳ್ಳಲು ಅವರು ತಿಳಿಸಿದರು.

ಸಾರ್ವಜನಿಕರ ಸಲಹೆಗಳು:

ಕಿತ್ತೂರು ಚೆನ್ನಮ್ಮನವರ ಸಾಹಸಗಾಥೆಯನ್ನು ಪರಿಚಯಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಂಗೊಳ್ಳಿ ರಾಯಣ್ಣ, ಅಮಟೂರ ಬಾಳಪ್ಪ, ಬಿಚ್ಚುಗತ್ತಿ ಭರಮಣ್ಣ ಸೇರಿದಂತೆ ಇನ್ನುಳಿದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಬೆಳಕು ಚೆಲ್ಲಬೇಕು.

ಕೋಟೆಯ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಮಾಹಿತಿ‌ ನೀಡಲು ಪ್ರವಾಸಿ ಮಾರ್ಗದರ್ಶಕರನ್ನು ನೇಮಿಸಬೇಕು; ಚೆನ್ನಮ್ಮನ ಜನ್ಮಸ್ಥಳದ ಅಭಿವೃದ್ಧಿಗೆ ಯೋಜನೆ ರೂಪಿಸಬೇಕು; ಪಟ್ಟಣ ಸ್ವಚ್ಛತೆ, ವಿದ್ಯುತ್ ದೀಪಾಲಂಕಾರ ಮಾಡಬೇಕು; ಕೋಟೆ ಗೋಡೆ ರಕ್ಷಣೆ ಮಾಡಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಸಲಹೆಗಳನ್ನು ನೀಡಿದರು.

ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಅವರು, ಕಳೆದ ವರ್ಷ ಎರಡು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿತ್ತು. ಈ ಬಾರಿ ಐದು ಕೋಟಿ ರೂಪಾಯಿ ಅನುದಾನ ಕೋರಿ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Získejte inspiraci a tipy pro vytváření chutných jídel doma, objevte nové lifestylové triky a naučte se pěstovat zdravé plodiny ve vaší zahradě. S našimi užitečnými články a nápady získáte dovednosti potřebné pro zlepšení kvality života a radost z vaší kuchyně a zahrady. Získejte nejlepší rady a triky od našich odborníků a staničte se mistrem ve vaření, životním stylu a zahradničení. Potraviny, které nejsou vhodné k konzumaci s kávou: Jak se zbavit Neuvěřitelný trik, o kterém vědí pouze ty nejlepší hospodyňky: proč Jak se zbavit čajových usazenin na šálcích Jak se zbavit zápachu z chladničky doma: 5 osvědčených Jak snížit Proč byste neměli házet knedlíky do vroucí vody: nečekaný důvod 5 způsobů, Jak se zbavit Jak efektivně odstranit staré usazeniny Brambory se Jak rychle vyčistit Tipy pro domácnost, kuchařství a zahradničení - články plné užitečných rad a triků, které vám pomohou v každodenním životě. Navštivte náš web pro jedinečné recepty, kreativní nápady a inspiraci pro úspěšnou zahradničení!