alex Certify ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ: ಪಿಕೆಪಿಎಸ್, ಡೇರಿ ಕಾರ್ಯದರ್ಶಿಗಳಿಗೆ ಸೇವಾ ಭದ್ರತೆ: ಸಚಿವ ರಾಜಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ: ಪಿಕೆಪಿಎಸ್, ಡೇರಿ ಕಾರ್ಯದರ್ಶಿಗಳಿಗೆ ಸೇವಾ ಭದ್ರತೆ: ಸಚಿವ ರಾಜಣ್ಣ

ಕಲಬುರಗಿ: ರೈತಾಪಿ ವರ್ಗಕ್ಕೆ ಅನುಕೂಲವಾಗಲು ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ(ಪಿಕೆಪಿಎಸ್) ಸಂಘಗಳನ್ನು ರಚಿಸುವುದಾಗಿ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.

ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಹಕಾರ ಇಲಾಖೆಯ ಕಲಬುರಗಿ ಪ್ರಾಂತ್ಯದ ಪ್ರಗತಿ ಪರಿಶೀಲನೆ ಸಭೆ ನಡೆಸಿದ‌ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯನಾಥನ್ ವರದಿ ಪ್ರಕಾರ ಪ್ರತಿ ಗ್ರಾಮ ಪಂಚಾಯತಿ ಕೇಂದ್ರಕ್ಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಇರಬೇಕೆಂದು ತಿಳಿಸಿದ್ದು, ಅದರಂತೆ ಸ್ಥಾಪಿಸಲಾಗುವುದು ಎಂದರು.

ಈಗ ಗ್ರಾಮ ಪಂಚಾಯಿತಿಗೊಂದು ಸಂಘಗಳಿಲ್ಲ. ಎಲ್ಲ ಗ್ರಾಮ ಪಂಚಾಯತಿ ಯಲ್ಲಿ ಸಂಘಗಳು ರಚನೆಯಾದಲ್ಲಿ ಎಲ್ಲ ರೈತರಿಗೆ ಸಮರ್ಪಕ ಸಹಾಯ ಕಲ್ಪಿಸಲು ಅನುಕೂಲವಾಗುತ್ತದೆ. ಹೊ‌ಸ ಸಂಘಗಳ ರಚನೆ ಕಾರ್ಯ ಆದಷ್ಟು ಬೇಗನೇ ಕೈಗೆತ್ತಿಕೊಳ್ಳಲಾಗುವುದು. ಇಂದಿನ ಸಭೆಯಲ್ಲಿ ಡಿಸೆಂಬರ್ ಒಳಗೆ ಗ್ರಾಮ ಪಂಚಾಯಿತಿವಾರು ಸಂಘಕ್ಕೆ  ಗ್ರಾಮ ಪಂಚಾಯತಿವಾರು ಗಡಿ ಗುರುತಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಅಲ್ಪವಾಧಿ ಮತ್ತು ದೀರ್ಘಾವಧಿ ಸಾಲದ ಮಿತಿ ಹೆಚ್ಚಳ

ಡಿ.ಸಿ.ಸಿ. ಬ್ಯಾಂಕುಗಳಿಂದ ನೀಡಲಾಗುವ ಶೂನ್ಯ ಬಡ್ಡಿ ದರದಲ್ಲಿನ ಅಲ್ಪಾವಧಿ ಸಾಲ 3 ರಿಂದ 5 ಲಕ್ಷ ರೂ.ಗಳಿಗೆ ಮತ್ತು ಶೇ.3ರ‌ ಬಡ್ಡಿ ದರದ ದೀರ್ಘಾವಧಿ ಸಾಲ 10 ರಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಿದ್ದು, ಇದರಿಂದ ರೈತರು ಕೃಷಿಯೊಂದಿಗೆ ಉಪ ಕಸುಬು ಕೈಗೊಳ್ಳಲು ಸಹಕಾರಿಯಾಗಲಿದೆ ಎಂದರು.

ಸೇವಾ ಭದ್ರತೆ

ರಾಜ್ಯದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಅಥವಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ  ಜತೆಗೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳನ್ನು  ಸಹಕಾರ ಸಂಘದ 128( ಎ) ಅನ್ವಯ ಸೇವಾ ಭದ್ರತೆ ಕಲ್ಪಿಸಲು ಉದ್ದೇಶಿಸಲಾಗಿದೆ. ಪಿಕೆಪಿಸ್ ಆಡಳಿತ ಮಂಡಳಿ ಅವಕೃಪೆಗೆ ಒಳಗಾದರೆ ಕಾರ್ಯದರ್ಶಿ ಮನೆಗೆ ಹೋಗುವ ಪರಿಸ್ಥಿತಿ ಈಗಿದೆ. ಇದನ್ನು ತಪ್ಪಿಸಲು ಮತ್ತು ಅವರಿಗೆ ಸೇವಾ ಭದ್ರತೆ ಕಲ್ಪಿಸುವುದರ ಜತೆಗೇ ಕೆಲವು ಜವಾಬ್ದಾರಿಗಳನ್ನು ವಹಿಸಲು ರೂಪು ರೇಷೆ ಸಿದ್ಧಮಾಡಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

6,000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಗಳು ಹಾಗೂ 15,500 ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳನ್ನು ಯಾವ ಮಾನದಂಡದ ಮೇಲೆ ಸೇವಾ ಭದ್ರತೆ ಕಲ್ಪಿಸಬೇಕೆಂಬುದನ್ನು ಇಲಾಖೆಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.

ಅವ್ಯವಹಾರ ತನಿಖೆಗೆ

ಸಹಕಾರ ಇಲಾಖೆಯಲ್ಲಿ ನಡೆದ ಅವ್ಯವಹಾರ ತನಿಖೆ ನಡೆಯುತ್ತವೆ. ಆದರೆ ಮುಂದೆ ಕ್ರಮ ಜರುಗುವುದಿಲ್ಲ ಎಂಬ ವ್ಯಾಪಕ ದೂರಿನ ಹಿನ್ನೆಲೆಯಲ್ಲಿ ಸಾಲ ಹಂಚಿಕೆಯಲ್ಲಿ ಎಸಗಿರುವ ಅವ್ಯಹಾರ ಅವ್ಯವಹಾರ ಹಗರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಅವ್ಯವಹಾರ ಹಣ ಅವ್ಯವಹಾರ ಎಸಗಿರುವ ಸಿಬ್ಬಂದಿಗಳ ಆಸ್ತಿ ಮುಟ್ಟುಗೋಲು ಹಾಕಿ ಹಣ ವಸೂಲಿ ಮಾಡಲಾಗುವುದು.  ಯಾರೇ ಎಷ್ಟೇ ದೊಡ್ಡವರಿದ್ದರೂ ತಪ್ಪಿತಸ್ಥರನ್ನು ರಕ್ಷಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...