alex Certify SHOCKING: ಕಾರ್ ನಲ್ಲಿ ಬಂದ ಅಪರಿಚಿತನಿಂದ ವ್ಯಕ್ತಿಗೆ ಚಾಕು ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕಾರ್ ನಲ್ಲಿ ಬಂದ ಅಪರಿಚಿತನಿಂದ ವ್ಯಕ್ತಿಗೆ ಚಾಕು ಇರಿತ

ಕುಂದಾಪುರ: ಕುಂದಾಪುರದ ಚಿಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಅಪರಿಚಿತನೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಕುಂದಾಪುರ ಮೂಲದ ರಾಘವೇಂದ್ರ(42) ಚಾಕು ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಘವೇಂದ್ರ ಕಾರ್ ನಲ್ಲಿ ತೆರಳುತ್ತಿದ್ದ ವೇಳೆ ಮತ್ತೊಂದು ಕಾರ್ ನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿ ಕಾರ್ ಅಡ್ಡಗಟ್ಟಿ ತೊಡೆ ಹಾಗೂ ಎದೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳು ರಾಘವೇಂದ್ರನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಸರ್ಕಲ್ ಇನ್ಸ್ಪೆಕ್ಟರ್ ನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...