alex Certify ಕೋಡಿಹಳ್ಳಿ ಚಂದ್ರಶೇಖರ್ ಅಸಂಘಟಿತ ದಲ್ಲಾಳಿಗಳ ಮುಖ್ಯಸ್ಥ: ರೇಣುಕಾಚಾರ್ಯ ಆರೋಪ – ನರ್ಸ್ ಕೇಸ್ ರೇಣುಕಾಚಾರ್ಯನಾ? ಆತ 3 ನೇ ದರ್ಜೆ ರಾಜಕಾರಣಿ: ಕೋಡಿಹಳ್ಳಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಡಿಹಳ್ಳಿ ಚಂದ್ರಶೇಖರ್ ಅಸಂಘಟಿತ ದಲ್ಲಾಳಿಗಳ ಮುಖ್ಯಸ್ಥ: ರೇಣುಕಾಚಾರ್ಯ ಆರೋಪ – ನರ್ಸ್ ಕೇಸ್ ರೇಣುಕಾಚಾರ್ಯನಾ? ಆತ 3 ನೇ ದರ್ಜೆ ರಾಜಕಾರಣಿ: ಕೋಡಿಹಳ್ಳಿ ತಿರುಗೇಟು

ಕೋಡಿಹಳ್ಳಿ ಚಂದ್ರಶೇಖರ್ ಅಸಂಘಟಿತ ದಲ್ಲಾಳಿಗಳ ಮುಖ್ಯಸ್ಥ ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೋಡಿಹಳ್ಳಿ ಚಂದ್ರಶೇಖರ್ ಸಮಸ್ಯೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರಿಗೂ ಮತ್ತು ಸಾರಿಗೆ ಸಿಬ್ಬಂದಿಗೆ ಏನು ಸಂಬಂಧ ಎಂದು ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ. ರೈತರು ಸೇರುವಲ್ಲಿಗೆ ಬಂದು ಭಾಷಣ ಮಾಡುತ್ತಾರೆ ಎಂದೆಲ್ಲಾ ಕೋಡಿಹಳ್ಳಿ ಬಗ್ಗೆ ರೇಣುಕಾಚಾರ್ಯ ಟೀಕಿಸಿದ್ದಾರೆ.

ಇದಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ತಿರುಗೇಟು ನೀಡಿದ್ದು, ನರ್ಸ್ ಕೇಸ್ ರೇಣುಕಾಚಾರ್ಯನಾ? ಎಂದು ಪ್ರಶ್ನಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅಸಂಘಟಿತ ದಲ್ಲಾಳಿಗಳ ಏಜೆಂಟರ ಮುಖ್ಯಸ್ಥ ಎಂದು ಶಾಸಕ ರೇಣುಕಾಚಾರ್ಯ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಯಡಿಯೂರಪ್ಪ ಅವರನ್ನು ಮೆಚ್ಚಿಸುವುದಕ್ಕಾಗಿ ರೇಣುಕಾಚಾರ್ಯ ಇಂತಹ ಆರೋಪ ಮಾಡುತ್ತಿದ್ದಾರೆ. ರೇಣುಕಾಚಾರ್ಯಗೆ ಶಿಸ್ತು ಇಲ್ಲ. ಕಚ್ಚೆ ಸರಿ ಇಲ್ಲ, ಬಾಯಿ ಸರಿ ಇಲ್ಲ. ಮೂರನೇ ದರ್ಜೆ ವ್ಯಕ್ತಿತ್ವದವರಿಗೆ ನಾನು ರಿಯಾಕ್ಟ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...