alex Certify BREAKING NEWS: ಬೆಂಗಳೂರಲ್ಲೂ ರೈತರ ಗಣರಾಜ್ಯೋತ್ಸವ ಪರೇಡ್, ವಾಹನ ರ್ಯಾಲಿಯೊಂದಿಗೆ ಬೃಹತ್ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಲ್ಲೂ ರೈತರ ಗಣರಾಜ್ಯೋತ್ಸವ ಪರೇಡ್, ವಾಹನ ರ್ಯಾಲಿಯೊಂದಿಗೆ ಬೃಹತ್ ಪ್ರತಿಭಟನೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿಯೂ ಗಣರಾಜ್ಯೋತ್ಸವ ದಿನದಂದು ಬೃಹತ್ ಹೋರಾಟ ನಡೆಸಲು ರೈತ ಸಂಘ ಮುಂದಾಗಿದೆ.

ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರು ದೆಹಲಿಯಲ್ಲಿ ಕೈಗೊಂಡಿರುವ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿಯೂ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ನಂತರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಗಣರಾಜ್ಯೋತ್ಸವ ದಿನದಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ.

ಬೆಂಗಳೂರಿಗೆ 10,000 ಕ್ಕೂ ಹೆಚ್ಚು ವಾಹನಗಳು ಆಗಮಿಸಲಿದ್ದು, ಗಣರಾಜ್ಯೋತ್ಸವದಂದು ಪ್ರಧಾನಿ ಮೋದಿ ಭಾಷಣ ಮಾಡಿದ ನಂತರ ತುಮಕೂರು ರಸ್ತೆ ಜಂಕ್ಷನ್ ನಿಂದ ರಾಷ್ಟ್ರಧ್ವಜ ಹಿಡಿದು ವಾಹನಗಳ ರ್ಯಾಲಿ ನಡೆಯಲಿದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...