alex Certify BIG NEWS: ದಿಢೀರ್ ನಿರ್ಧಾರ ಬದಲು -ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಿಢೀರ್ ನಿರ್ಧಾರ ಬದಲು -ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್

ಬೆಂಗಳೂರು: ಕಳೆದ 4 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಸಿಬ್ಬಂದಿ ಮುಷ್ಕರ ಇವತ್ತು ಅಂತ್ಯವಾಗಲಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರ ಹಿಂಪಡೆಯಲು ತೀರ್ಮಾನಿಸಲಾಗಿದ್ದು, ಸತ್ಯಾಗ್ರಹ ಮುಂದುವರೆಸಲಾಗುವುದು ಎಂದು ಹೇಳಲಾಗಿದೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಮುಷ್ಕರ ಹಿಂಪಡೆಯುವ ಆಲೋಚನೆ ಮಾಡಿರುವುದಾಗಿ ಹೇಳಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರೊಂದಿಗೆ ಚರ್ಚೆ ನಡೆಸಿ ಮುಷ್ಕರ ಹಿಂಪಡೆಯುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಮುಷ್ಕರದಿಂದಾಗಿ ಜನರಿಗೆ ಸಮಸ್ಯೆಯಾಗಿದ್ದು, ರಾತ್ರಿ ಮಾತುಕತೆ ನಂತರ ಗೊಂದಲ, ಅನುಮಾನ ಹಿನ್ನೆಲೆಯಲ್ಲಿ ಮುಷ್ಕರ ಮುಂದುವರೆಸಲು ತೀರ್ಮಾನಿಸಲಾಗಿತ್ತು. ಸರ್ಕಾರದ ಗೊಂದಲದ ನಿಲುವಿನಿಂದಾಗಿ ಮುಷ್ಕರ ಮುಂದುವರೆಸಲು ತೀರ್ಮಾನ ಕೈಗೊಂಡಿದ್ದರೂ ಈಗ ಮುಷ್ಕರ ಹಿಂಪಡೆಯುವ ಕುರಿತಾಗಿ ನೌಕರರೊಂದಿಗೆ ಚರ್ಚಿಸಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜನರ, ಸರ್ಕಾರದ ಹಿತ ಮುಖ್ಯವಾಗಿದೆ. ಇದರಲ್ಲಿ ನನ್ನ ಪ್ರತಿಷ್ಠೆಯ ಪ್ರಶ್ನೆ ಇಲ್ಲ. ನೌಕರರ ಹಿತ ಕಾಯಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...