alex Certify BIG BREAKING: ಕೋಲಾರದಿಂದ ಸಿದ್ಧರಾಮಯ್ಯ ಸ್ಪರ್ಧೆಗೆ ಕಾಂಗ್ರೆಸ್ ಮುಖಂಡರ ಸಹಮತ, ಗೆಲ್ಲಿಸುವುದಾಗಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೋಲಾರದಿಂದ ಸಿದ್ಧರಾಮಯ್ಯ ಸ್ಪರ್ಧೆಗೆ ಕಾಂಗ್ರೆಸ್ ಮುಖಂಡರ ಸಹಮತ, ಗೆಲ್ಲಿಸುವುದಾಗಿ ಘೋಷಣೆ

ಕೋಲಾರ: ಕೋಲಾರ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾರದಲ್ಲಿ ಅವರು ಸ್ಪರ್ಧಿಸುವುದಾದರೆ ಸಹಕಾರ ನೀಡುವುದಾಗಿ ಕಾಂಗ್ರೆಸ್ ಮುಖಂಡರು ಘೋಷಣೆ ಮಾಡಿದ್ದಾರೆ.

ಕೋಲಾರ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಕೈ ಮೇಲೆತ್ತಿ ಸಿದ್ಧರಾಮಯ್ಯ ಸ್ಪರ್ಧೆಗೆ ಸಹಮತ ವ್ಯಕ್ತಪಡಿಸಲಾಗಿದೆ. ಕೋಲಾರ ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಶಾಸಕರಾದ ಶ್ರೀನಿವಾಸ ಗೌಡ, ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಅನಿಲ್ ಕುಮಾರ್, ಮಾಜಿ ಶಾಸಕ ಸುಧಾಕರ್ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು. ಕೋಲಾರ ಜಿಲ್ಲಾ ಕಾಂಗ್ರೆಸ್ ನ ಹಲವು ನಾಯಕರು ಕೈ ಮೇಲೆತ್ತಿ ಸಹಮತ ವ್ಯಕ್ತಪಡಿಸಿದ್ದಾರೆ.

ನವೆಂಬರ್ 13 ರಂದು ಕೋಲಾರಕ್ಕೆ ಸಿದ್ದರಾಮಯ್ಯ ಭೇಟಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದೆ. ಪೂರ್ವಭಾವಿ ಸಭೆಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೆ ಸಹಕಾರ ನೀಡುವುದಾಗಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಅವರು ಸ್ಪರ್ಧಿಸಿದಲ್ಲಿ ಬೆಂಬಲಿಸುವುದಾಗಿ ಸಹಮತ ವ್ಯಕ್ತಪಡಿಸಲಾಗಿದ್ದು, ಅವರ ಗೆಲುವಿಗೆ ಶ್ರಮಿಸುವುದಾಗಿ ಮುಖಂಡರು ಘೋಷಣೆ ಮಾಡಿದ್ದಾರೆ.

ನವೆಂಬರ್ 13ರಂದು ಸಿದ್ದರಾಮಯ್ಯ ಕೋಲಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನರಸಾಪುರ ಕೆರೆಗೆ ಪೂಜೆ ಸಲ್ಲಿಸಿ ಕುರುಡು ಮಲೆ ವಿನಾಯನಿಕನಿಗೆ ಪೂಜೆ ನೆರವೇರಿಸಲಿದ್ದಾರೆ. ಸೀತಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿ, ದಿವಂಗತ ಬೈರೇಗೌಡರ ಸಮಾಧಿಗೆ ಭೇಟಿ ನೀಡಲಿದ್ದಾರೆ. ಅಲ್ಲದೇ ಕೋಲಾರದಲ್ಲಿ ಸ್ಪರ್ಧಿಸುವ ಕುರಿತು ಕಾಂಗ್ರೆಸ್ ಜನಪ್ರತಿನಿಧಿಗಳು, ಮುಖಂಡರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...