alex Certify BIG NEWS: ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ: ಮೀನು ಹಿಡಿಯುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪಂಚಾಯ್ತಿ ಮುಖಂಡರ ಎದುರಲ್ಲೇ ವ್ಯಕ್ತಿಯ ಬರ್ಬರ ಹತ್ಯೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರದ ಮಾಲೂರು ತಾಲೂಕಿನ ಸಿಗೊಂಡ ಹಳ್ಳಿ ಬಳಿ ಕೊಲೆ ಆರೋಪಿಗಳ ಮೇಲೆ ಆತ್ಮರಕ್ಷಣೆಗಾಗಿ ಮಾಸ್ತಿ ಠಾಣೆ ಇನ್ಸ್ ಪೆಕ್ಟರ್ ರಾಮಪ್ಪ ಗುತ್ತೇರ್ ಫೈರಿಂಗ್ ಮಾಡಿದ್ದಾರೆ.

ಕೊಲೆ ಆರೋಪಿಗಳಾದ ಅನಿಲ್ ಹಾಗೂ ಪ್ರಮೋದ್ ಎಂಬುವವರನ್ನು ಬಂಧಿಸಲೆಂದು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ರಾಮಪ್ಪ ಆರೋಪಿಗಳ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಮೀನು ಹಿಡಿಯುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪಂಚಾಯ್ತಿ ವೇಳೆ ಅನಿಲ್ ಹಾಗೂ ಪ್ರಮೋದ್ ಎಂಬುವವರು ಲೋಕೇಶ್ ಹಾಗೂ ದರ್ಶನ್ ಎಂಬುವವರ ಮೇಲೆ ಚಾಕುವಿನಿಂದ ಇರಿದಿದ್ದರು. ಶುಕ್ರವಾರ ಈ ಘಟನೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಲೋಕೇಶ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...