alex Certify KPTCL ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಪ್ರಮುಖ ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KPTCL ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಪ್ರಮುಖ ಆರೋಪಿ ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದ ಪ್ರಮುಖ ಆರೋಪಿಯನ್ನು ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ಸಂಜೀವ ಭಂಡಾರಿ ಬಂಧಿತ ಆರೋಪಿ. ಅಕ್ರಮ ಬಯಲಿಗೆ ಬಂದಾಗಿನಿಂದ ತಲೆಮರೆಸಿಕೊಂಡಿದ್ದ ಈತನ ಬಂಧನಕ್ಕೆ ಬೆಳಗಾವಿ ಜಿಲ್ಲೆ ಪೊಲೀಸರು ಬಲೆ ಬೀಸಿದ್ದರು. ನಿನ್ನೆ ಹುಬ್ಬಳ್ಳಿ – ಧಾರವಾಡ ಬೆಂಡಿಗೇರಿ ಪೊಲೀಸರ ಸಹಾಯದೊಂದಿಗೆ ಹುಬ್ಬಳ್ಳಿಯಲ್ಲಿ ಪತ್ತೆ ಹಚ್ಚಿ ಗೋಕಾಕ್ ನಲ್ಲಿ ಬಂಧಿಸಲಾಗಿದೆ.

ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಂದ ಹಣ ಪಡೆದುಕೊಂಡು ಎಲೆಕ್ಟ್ರಾನಿಕ್ ಉಪಕರಣಗಳ ಮೂಲಕ ಪರೀಕ್ಷೆಯಲ್ಲಿ ಅಕ್ರಮ ನಡೆಸಲು ಸಂಜೀವ ಭಂಡಾರಿ ನೆರವಾಗಿದ್ದ. ನಿರೀಕ್ಷಣಾ ಜಾಮೀನಿಗೆ ಈತ ಸಲ್ಲಿಸಿದ್ದ ಅರ್ಜಿಯನ್ನು ಗೋಕಾಕ್ 12 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿತ್ತು. ಆರೋಪಿಯನ್ನು ಬಂಧಿಸಿ ಗೋಕಾಕ್ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...