alex Certify ‘KRS ಕದನ’; ರಾಜ್ಯಪಾಲರಿಗೆ ದೂರು ನೀಡಿದ ಸಂಸದೆ ಸುಮಲತಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘KRS ಕದನ’; ರಾಜ್ಯಪಾಲರಿಗೆ ದೂರು ನೀಡಿದ ಸಂಸದೆ ಸುಮಲತಾ

ಬೆಂಗಳೂರು: ಅಕ್ರಮ ಗಣಿಗಾರಿಕೆಯಿಂದಾಗಿ ಕೆ.ಆರ್.ಎಸ್.ಅಣೆಕಟ್ಟಿಗೂ ತೊಂದರೆಯಾಗುತ್ತಿರುವ ಬಗ್ಗೆ ಧ್ವನಿ ಎತ್ತಿದ್ದ ಸಂಸದೆ ಸುಮಲತಾ ಇದೀಗ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ ಬಳಿಕ ಮಾತನಾಡಿರುವ ಸುಮಲತಾ, ಮಂಡ್ಯ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಸ್ಟೋನ್ ಬ್ಲಾಸ್ಟಿಂಗ್ ನಿಂದ ಸುತ್ತಮುತ್ತಲ ಹಳ್ಳಿಗಳಲ್ಲಿ ಎದುರಾಗುತ್ತಿರುವ ಸಮಸ್ಯೆ ಹಾಗೂ ರೈತರು ಮತ್ತು ಬಡವರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಮಾಹಿತಿ ನೀಡಿದ್ದೇನೆ ಎಂದರು.

ಟೋಕಿಯೋ ಒಲಿಂಪಿಕ್ಸ್​: ಇಂದು ಟೋಕಿಯೋಗೆ ಭಾರತದ ಮೊದಲ ಬ್ಯಾಚ್​ ಪ್ರಯಾಣ; ಕ್ರೀಡಾ ಸಚಿವರಿಂದ ಔಪಚಾರಿಕ ಬೀಳ್ಕೊಡುಗೆ

ಕೆ.ಆರ್.ಎಸ್. ಸುತ್ತ ಮುತ್ತಲ ಪ್ರದೇಶದಲ್ಲಿ ಸ್ಟೋನ್ ಬ್ಲಾಸ್ಟಿಂಗ್ ನಡೆಸಲಾಗುತ್ತಿದೆ. ಇದರಿಂದ ಅಣೆಕಟ್ಟಿಗೆ ಸಮಸ್ಯೆಯಾಗುವ ಸಾಧ್ಯತೆಯಿರುವುದರಿಂದ ಈ ಬಗ್ಗೆಯೂ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ. ಟಾಸ್ಕ್ ಫೋರ್ಸ್ ಮಾದರಿಯಲ್ಲಿ ತನಿಖೆ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...