alex Certify BREAKING: ಇಂದು ಬೆಳಗ್ಗೆಯಿಂದಲೇ KRS ಡ್ಯಾಂನಿಂದ ನೀರು ಬಿಡುಗಡೆ, ಹೊಸದಾಗಿ ಬೆಳೆ ಹಾಕದಂತೆ ರೈತರಿಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಇಂದು ಬೆಳಗ್ಗೆಯಿಂದಲೇ KRS ಡ್ಯಾಂನಿಂದ ನೀರು ಬಿಡುಗಡೆ, ಹೊಸದಾಗಿ ಬೆಳೆ ಹಾಕದಂತೆ ರೈತರಿಗೆ ಮನವಿ

ಮೈಸೂರು: ಇಂದು ಬೆಳಗ್ಗೆಯಿಂದಲೇ ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡಲಾಗುವುದು. ಕಾವೇರಿ ನದಿ ಮತ್ತು ನಾಲೆಗಳಿಗೆ ನೀರು ಬಿಡುಗಡೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹರಿಸಲು ತೀರ್ಮಾನಿಸಲಾಗಿದೆ. ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ನದಿ ಹಾಗೂ ನಾಲೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಹೊಸದಾಗಿ ಯಾವುದೇ ಬೆಳೆಗಳನ್ನು ಹಾಕದಂತೆ ರೈತರಿಗೆ ಮನವಿ ಮಾಡಲಾಗಿದೆ. ಮಳೆ ಬಾರದೆ ಇದ್ದರೆ 10 ದಿನ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...