alex Certify ಕಾಂಗ್ರೆಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಳ, ರಾಜಕಾರಣ ಮಾಡಲು ಹೋಗಿ ಸೋಂಕು ಹರಡಿದೆ: ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಳ, ರಾಜಕಾರಣ ಮಾಡಲು ಹೋಗಿ ಸೋಂಕು ಹರಡಿದೆ: ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಳವಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಮೋಟಮ್ಮ, ಅಜಯ್ ಸಿಂಗ್ ಸೇರಿದಂತೆ ಹಲವರಿಗೆ ಕೊರೊನಾ ಸೋಂಕು ಬಂತು. ಈ ಮೊದಲು ಸೋಂಕು ಬಂದಿರಲಿಲ್ಲ. ಪಾದಯಾತ್ರೆಯಲ್ಲಿ ಭಾಗಿಯಾದ ನಂತರ ಅವರಿಗೆ ಸೋಂಕು ಬಂದಿದೆ ಎಂದರು.

ರಾಜಕಾರಣ ಮಾಡಲು ಹೋಗಿ ಸೋಂಕು ಹರಡಿದೆ. ಎಲ್ಲದಕ್ಕೂ ರಾಜಕಾರಣವನ್ನು ಬೆರೆಸುವುದು ಒಳ್ಳೆಯ ಬೆಳವಣಿಗೆಯಲ್ಲ. ಕಾಂಗ್ರೆಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಳವಾಗಿದೆ ಎಂದು ಗಂಭೀರ ಆರೋಪ ಮಾಡಿದ ಅವರು, ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರಿಂದ ಕೊರೋನಾ ಬಂದಿದೆ. ಆರೋಗ್ಯದ ದೃಷ್ಟಿಯಿಂದ ಪಾದಯಾತ್ರೆ ಮಾಡದಂತೆ ಮನವಿ ಮಾಡಿದ್ದೆವು. ರಾಜಕಾರಣ ಮಾಡಲು ಹೋಗಿ ಕೊರೊನಾ ಸೋಂಕು ಹರಡುವಂತಾಯ್ತು. ಎಲ್ಲದಕ್ಕೂ ರಾಜಕಾರಣ ಬೆರೆಸುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದ್ದಾರೆ.

ಪಾದಯಾತ್ರೆಗೆ ಹೋಗಿದ್ದಕ್ಕೆ ಕೊರೋನಾ ಸೋಂಕು ಬಂದಿದೆ. ದಯವಿಟ್ಟು ನೀವು ಆರೋಗ್ಯವಾಗಿರಿ. ನಮ್ಮನ್ನೂ ಆರೋಗ್ಯವಾಗಿರಲು ಬಿಡಿ. ಆರೋಗ್ಯದ ದೃಷ್ಟಿಯಿಂದ ಕೊರೋನಾ ಮುಗಿದ ಮೇಲೆ ಪಾದಯಾತ್ರೆ ಮಾಡಿ. ಕಾರ್ಯಕರ್ತರು ಪಾದಯಾತ್ರೆಗೆ ಹೋಗಿ ಬಂದು ತಮ್ಮ ಜಿಲ್ಲೆಗಳಿಗೆ ಹೋದಾಗ ಅಲ್ಲಿಯೂ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ, ಕೊರೋನಾ ಮುಗಿಯುವವರೆಗೂ ರಾಜಕಾರಣ ಬಿಡಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...