alex Certify ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಯೋಗೇಶ್ವರ್ ಜತೆಗೆ ಹೊಸ ಮುಖಗಳಿಗೆ ಸಂಪುಟದಲ್ಲಿ ಅವಕಾಶ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಯೋಗೇಶ್ವರ್ ಜತೆಗೆ ಹೊಸ ಮುಖಗಳಿಗೆ ಸಂಪುಟದಲ್ಲಿ ಅವಕಾಶ ಸಾಧ್ಯತೆ

ಬೆಳಗಾವಿ: ಹೊಸ ವರ್ಷದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಸಚಿವ ಸ್ಥಾನ ಸಿಗದ ಕಾರಣ ಅಧಿವೇಶನದಲ್ಲಿ ಭಾಗವಹಿಸದೇ ದೂರ ಉಳಿದಿದ್ದ ಕೆ.ಎಸ್. ಈಶ್ವರಪ್ಪ, ರಮೇಶ ಜಾರಕಿಹೊಳಿ, ಸಿ.ಪಿ. ಯೋಗೇಶ್ವರ್ ಇಂದಿನಿಂದ ಸದನಕ್ಕೆ ಹಾಜರಾಗಲಿದ್ದಾರೆ.

ಮೂರು ದಿನದಿಂದ ಸದನಕ್ಕೆ ಗೈರು ಹಾಜರಾಗಿದ್ದ ನಾಯಕರು ಇಂದಿನಿಂದ ಸದನದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ವರಿಷ್ಠರ ಭೇಟಿಗೆ ಸಿಎಂ ದೆಹಲಿಗೆ ತೆರಳಲಿದ್ದು, ಮುಂದಿನವಾರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆ.ಎಸ್. ಈಶ್ವರಪ್ಪ, ನನಗೆ ಮತ್ತು ರಮೇಶ ಜಾರಕಿಹೊಳಿಯವರಿಗೆ ಸಚಿವ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿಗಳು ವರಿಷ್ಠರೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ. ಅವರು ಕೂಡ ಒಪ್ಪಿದ್ದು ನಮ್ಮ ಸಚಿವ ಸ್ಥಾನ ಖಾತ್ರಿಯಾಗಿದೆ. ಬೇರೆಯವರ ವಿಚಾರ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...