alex Certify ಕಳ್ಳತನವಾಗಿದ್ದ KSRTC ಬಸ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಳ್ಳತನವಾಗಿದ್ದ KSRTC ಬಸ್ ಪತ್ತೆ

ಕಲಬುರಗಿ: ಕಳ್ಳತನವಾಗಿ 13 ಗಂಟೆಗಳ ನಂತರ ಕೆಎಸ್ಆರ್ಟಿಸಿ ಬಸ್ ಪತ್ತೆಯಾಗಿದೆ. ತೆಲಂಗಾಣದ ತಾಂಡೂರು ತಾಲೂಕಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಪತ್ತೆಯಾಗಿದೆ.

ಇಂದು ಮುಂಜಾನೆ 3.37 ಕ್ಕೆ ಬಸ್ ಕಳವು ಮಾಡಲಾಗಿತ್ತು. ಕಲಬುರ್ಗಿ ಜಿಲ್ಲೆ ಚಿಂಚೋಳಿ ಬಸ್ ನಿಲ್ದಾಣದಿಂದ ಬಸ್ ಕಳವು ಮಾಡಿದ ಖದೀಮರು ತಾಂಡೂರು ತಾಲೂಕಿನ ಭೂಕೈಲಾಸ ತಾಂಡಾದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ತಾಂಡಾ ಹೊರವಲಯದಲ್ಲಿ ಬಸ್ ಬಿಟ್ಟು ಖದೀಮರು ಪರಾರಿಯಾಗಿದ್ದಾರೆ. ಕಲ್ಯಾಣ ಕರ್ನಾಟಕ ಸಾರಿಗೆಗೆ ಸೇರಿದ ಬಸ್ ಇದಾಗಿದ್ದು, ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್ಆರ್ಟಿಸಿ ಬಸ್ ಕಳವು ಮಾಡಿದ್ದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...