alex Certify ನೌಕರರಿಗೆ ದಸರಾ ಉಡುಗೊರೆ ನೀಡಿದ KSRTC, ವೇತನಕ್ಕಾಗಿ 171 ಕೋಟಿ ರೂ. ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೌಕರರಿಗೆ ದಸರಾ ಉಡುಗೊರೆ ನೀಡಿದ KSRTC, ವೇತನಕ್ಕಾಗಿ 171 ಕೋಟಿ ರೂ. ಬಿಡುಗಡೆ

ಬೆಂಗಳೂರು: ದಸರಾ ಹಬ್ಬದ ಹೊತ್ತಲ್ಲೇ ಸಾರಿಗೆ ಸಂಸ್ಥೆಯ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಾಕಿ ವೇತನ ಬಿಡುಗಡೆ ಮಾಡುವುದರೊಂದಿಗೆ ನೌಕರರಿಗೆ ದಸರಾ ಕೊಡುಗೆ ನೀಡಲಾಗಿದೆ.

4 ನಿಗಮಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯ ಆಗಸ್ಟ್ ತಿಂಗಳ ವೇತನಕ್ಕೆ ಅಗತ್ಯವಿರುವ ಶೇಕಡಾ 50 ರಷ್ಟು 171.69 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.

ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಆಗಸ್ಟ್ ತಿಂಗಳ ವೇತನದ ಶೇಕಡ 50 ರಷ್ಟು ಬಿಡುಗಡೆ ಮಾಡಲಾಗಿದೆ. ಕೊರೋನಾದಿಂದಾಗಿ ಸಾರಿಗೆ ಬಸ್ ಗಳಲ್ಲಿ ನಿರೀಕ್ಷಿತ ಆದಾಯ ಸಂಗ್ರಹವಾಗದೇ ವೇತನ ಪಾವತಿಗೆ ಸಮಸ್ಯೆಯಾಗಿದೆ.2021 -22 ನೇ ಸಾಲಿನ ಆಯವ್ಯಯ ಸಹಾಯಧನದಡಿ ಲಭ್ಯವಿರುದ ಅನುದಾನವನ್ನು ವೇತನಕ್ಕಾಗಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...