alex Certify ಮಹಿಳಾ ಕಂಡಕ್ಟರ್ ಗಳಿಗೆ KSRTC ಅಧಿಕಾರಿಗಳಿಂದ ಕಿರುಕುಳ; ಸಿಎಂ ಹಾಗೂ ಸಾರಿಗೆ ಸಚಿವರಿಗೆ ಪತ್ರ ಬರೆದು ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಕಂಡಕ್ಟರ್ ಗಳಿಗೆ KSRTC ಅಧಿಕಾರಿಗಳಿಂದ ಕಿರುಕುಳ; ಸಿಎಂ ಹಾಗೂ ಸಾರಿಗೆ ಸಚಿವರಿಗೆ ಪತ್ರ ಬರೆದು ದೂರು

ಬೆಂಗಳೂರು: ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದೆ. ಆದರೆ ಕೆ ಎಸ್ ಆರ‍್ ಟಿಸಿ ಅಧಿಕಾರಿಗಳು ಮಹಿಳಾ ಕಂಡಕ್ಟರ್ ಗಳಿಗೆ ಹಗಲು ರಾತ್ರಿ ಶ್ರಮಿಸುವಂತೆ ಟಾರ್ಚರ್ ನೀಡಿತ್ತಿದ್ದಾರೆ. ಈ ಬಗ್ಗೆ ಮಹಿಳಾ ಕಂಡಕ್ಟರ್ ಗಳು ಸಾರಿಗೆ ಸಚಿವರಿಗೆ ಪತ್ರ ಬರೆದು ದೂರು ನೀಡಿದ್ದಾರೆ.

ಬೆಂಗಳೂರಿನ ದೀಪಾಂಜಲಿ ನಗರದ ಕೆ ಎಸ್ ಆರ‍್ ಟಿ ಸಿ ಡಿಪೋ 5ರ ಕಂಡಕ್ಟರ್ ನಂಜಮ್ಮ ಅಧಿಕಾರಿಗಳ ಕಿರುಕುಳದ ಬಗ್ಗೆ ವಿಡಿಯೋ ಮಾಡಿ ಅಳಲು ತೋಡಿಕೊಂಡಿದ್ದಾರೆ. ಋತುಚಕ್ರದ ಸಮಸ್ಯೆ ಇದ್ದರೂ ಡ್ಯೂಟಿ ಮಾಡಿ ಎಂದು ಟಾರ್ಚರ್ ಕೊಡುತ್ತಿದ್ದಾರೆ. ಅಧಿಕಾರಿಗಳ ಕಿರುಕುಳದ ಬಗ್ಗೆ ಸಿಟಿಎಂ ಅಂತೋಣಿ ಜಾರ್ಜ್ ಗಮನಕ್ಕೆ ತಂದರೆ ದರ್ಪದ ಮಾತುಗಳನ್ನು ಆಡಿ ಅವಾಚ್ಯವಾಗಿ ನಿಂದಿಸುತ್ತಿದ್ದಾರೆ. ಈ ಹಿಂದೆಯೂ ಅಧಿಕಾರಿಗಳ ಕಿರುಕುಳದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ದೂರು ನೀಡಿದ್ದಾಗಿ ತಿಳಿಸಿದ್ದಾರೆ.

ಡಿಪೋ ಮ್ಯಾನೇಜರ್ ಅನಗತ್ಯವಾಗಿ ತಡವಾಗಿ ಡ್ಯೂಟಿ ಹಾಕುತ್ತಾರೆ. ಬೇಗ ಬಂದರೂ ಡ್ಯೂಟಿ ಹಾಕದೇ ಸುಮ್ಮನೇ ಕೂರಿಸಿರುತ್ತಾರೆ. ಬಳಿಕ ತಡವಾಗಿ ಡ್ಯೂಇ ಹಾಕಿ ಎಷ್ಟು ತಡವಾದರೂ ಡ್ಯೀಟಿ ಮುಗಿಸಿ ಮನೆಗೆ ಹೋಗಬೇಕು ಎಂದು ಹೇಳುತ್ತಾರೆ. ಇದರಿಂದ ಮಹಿಳಾ ಕಂಡಕ್ಟರ್ ಬೇಸತ್ತು ಹೋಗಿದ್ದು, 44 ಸಿಬ್ಬಂದಿಗಳು ಸಹಿ ಸಂಗ್ರಹಿಸಿ ಅಧಿಕಾರಿಗಳ ವಿರುದ್ಧ ಸಿಎಂ ಹಾಗೂ ಸಾರಿಗೆ ಸಚಿವರಿಗೆ ಪತ್ರದ ಮೂಲಕ ದೂರು ನೀಡಿದ್ದಾಗಿ ಮಂಜಮ್ಮ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...