alex Certify ವಿಫಲವಾಯ್ತು ಸಾರಿಗೆ ನೌಕರರು –ಸಚಿವ ಶ್ರೀರಾಮುಲು ಸಂಧಾನ ಸಭೆ: ಪ್ರತಿಭಟನೆ ಮುಂದುವರೆಸಲು ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಫಲವಾಯ್ತು ಸಾರಿಗೆ ನೌಕರರು –ಸಚಿವ ಶ್ರೀರಾಮುಲು ಸಂಧಾನ ಸಭೆ: ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಬೆಳಗಾವಿ: ಸಾರಿಗೆ ನೌಕರರು ಮತ್ತು ಸಚಿವ ಬಿ. ಶ್ರೀರಾಮುಲು ಸಂಧಾನ ಮಾತುಕತೆ ವಿಫಲವಾಗಿದೆ. ಬೆಳಗಾವಿಯ ಸುವರ್ಣಸೌಧದ ಬಳಿ ಬಸ್ತವಾಡದಲ್ಲಿ ನಡೆದ ಸಭೆ ವಿಫಲವಾಗಿದೆ.

ಕೆಲವು ಷರತ್ತು ಹಾಕಿದ ಸಚಿವ ಶ್ರೀರಾಮುಲು ಧರಣಿ ಹಿಂಪಡೆಯಲು ಸಾರಿಗೆ ಸಿಬ್ಬಂದಿಗೆ ಮನವಿ ಮಾಡಿದ್ದಾರೆ. ಆದರೆ, ಬೇಡಿಕೆ ಈಡೇರಿಸುವ ಬಗ್ಗೆ ಲಿಖಿತ ರೂಪದಲ್ಲಿ ನೀಡುವಂತೆ ಸಿಬ್ಬಂದಿ ಪಟ್ಟು ಹಿಡಿದಿದ್ದಾರೆ. ಲಿಖಿತ ರೂಪದಲ್ಲಿ ನೀಡಲು ಒಪ್ಪದ ಕಾರಣ ಸಂಧಾನ ಮಾತುಕತೆ ವಿಫಲವಾಗಿದೆ. ಹೀಗಾಗಿ ಸಾರಿಗೆ ನೌಕರರು ಪ್ರತಿಭಟನೆ ಮುಂದುವರೆಸುವುದಾಗಿ ಘೋಷಿಸಿದ್ದಾರೆ.

ವಜಗೊಂಡ 2500 ಸಾರಿಗೆ ನೌಕರರ ಮರು ನೇಮಕ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬಂದು ಸಚಿವ ಶ್ರೀರಾಮುಲು ಸಂಧಾನಕ್ಕೆ ಮುಂದಾಗಿದ್ದರು. ಆದರೆ, ಮಾತುಕತೆ ವಿಫಲವಾಗಿದ್ದು, ಪ್ರತಿಭಟನೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...