alex Certify ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: KSRTC, BMTC ಸಿಬ್ಬಂದಿ ಮುಷ್ಕರ ಮುಂದುವರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: KSRTC, BMTC ಸಿಬ್ಬಂದಿ ಮುಷ್ಕರ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದಿನಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಸಲಿದ್ದಾರೆ.

ನಿನ್ನೆ ರಾತ್ರಿ ಪಾಳಿಯ ಬಿಎಂಟಿಸಿ ಬಸ್ ಗಳಾದರೂ ರಸ್ತೆಗೆ ಇಳಿದಿದ್ದವು. ಇಂದು ಯಾವುದೇ ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯುವುದಿಲ್ಲ. ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ ಗಳ ಸಂಚಾರ ಕೂಡ ಅನುಮಾನವೆನ್ನಲಾಗಿದೆ.

1.37 ಲಕ್ಷ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ನಾಲ್ಕು ನಿಗಮಗಳ 18 ಸಾವಿರ ಬಸ್ ಗಳು ನಿಂತಲ್ಲೇ ನಿಂತಿವೆ. ಡಿಸೆಂಬರ್ 10 ರಂದು ಸಾರಿಗೆ ನೌಕರರು ಪ್ರತಿಭಟನಾ ಮೆರವಣಿಗೆ ನಡೆಸಿ, ರ್ಯಾಲಿ ನಡೆಸಿದರೂ ಸರ್ಕಾರ ಸ್ಪಂದಿಸಲಿಲ್ಲ. ಬೇಡಿಕೆ ಈಡೇರಿಸುವ ಸಂಬಂಧ ಧರಣಿ ನಿರತರನ್ನು ಕರೆಸಿ ಚರ್ಚೆ ಮಾಡದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಅಲ್ಲದೇ, ಸಾವಿರಾರು ಸಾರಿಗೆ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದರಿಂದಾಗಿ ರೊಚ್ಚಿಗೆದ್ದು ನಿನ್ನೆಯಿಂದ ಕೆಲಸಕ್ಕೆ ಗೈರು ಹಾಜರಾಗಿ ಹೋರಾಟ ಕೈಗೊಂಡಿದ್ದಾರೆ. ಇಂದಿನಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಭಾಗದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...