alex Certify ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಿದ ಕುಮಾರ್ ಬಂಗಾರಪ್ಪ ವಿರುದ್ಧ ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಿದ ಕುಮಾರ್ ಬಂಗಾರಪ್ಪ ವಿರುದ್ಧ ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಅವರ ವಿರುದ್ಧ ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ನಮೋ ವೇದಿಕೆಯ ಅಧ್ಯಕ್ಷ ಪಾಣಿ ರಾಜಪ್ಪ ಮಾಹಿತಿ ನೀಡಿದ್ದಾರೆ.

ಶಾಸಕ ಕುಮಾರ್ ಬಂಗಾರಪ್ಪ ಸ್ವಾಭಿಮಾನಿ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ. ಹೀಗಾಗಿ ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಐದು ವರ್ಷಗಳ ಕಾಲ ತಮ್ಮ ಗೆಲುವಿಗೆ ಶ್ರಮಿಸಿದ ಮುಖಂಡರು ಕಾರ್ಯಕರ್ತರನ್ನು ಮೂಲೆಗುಂಪು ಮಾಡಿದ ಕುಮಾರ್ ಬಂಗಾರಪ್ಪ ಸರ್ವಾಧಿಕಾರಿ ಧೋರಣೆ ತೋರಿದ್ದಾರೆ. ಅವರ ಧೋರಣೆ ಖಂಡಿಸಿ ಪಕ್ಷದ ವರಿಷ್ಠರ ಗಮನಕ್ಕೆ ತಂದು ಈ ಬಾರಿ ಟಿಕೆಟ್ ನೀಡದಂತೆ ಒತ್ತಾಯಿಸಲಾಗಿತ್ತು ಎಂದು ಹೇಳಿದ್ದಾರೆ.

ಸ್ವಾಭಿಮಾನಿ ಕಾರ್ಯಕರ್ತರ ಅಭಿಪ್ರಾಯ ಧಿಕ್ಕರಿಸಿ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ನಮ್ಮ ಶಕ್ತಿ ಏನು ಎನ್ನುವುದನ್ನು ಚುನಾವಣೆಯಲ್ಲಿ ತೋರಿಸಲಿದ್ದೇವೆ. ನಮೋ ವೇದಿಕೆಯಿಂದ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...