alex Certify ಕೆರೆಯಲ್ಲಿ ಮುಳುಗುತ್ತಿದ್ದ ಬಾಲಕಿಯರ ರಕ್ಷಿಸಿದ ಬಸ್ ಚಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆರೆಯಲ್ಲಿ ಮುಳುಗುತ್ತಿದ್ದ ಬಾಲಕಿಯರ ರಕ್ಷಿಸಿದ ಬಸ್ ಚಾಲಕ

ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಬಾಲಕಿಯರನ್ನು ಬಸ್ ಚಾಲಕ ರಕ್ಷಿಸಿದ ಘಟನೆ ಶಿರಾ ಸಮೀಪದ ಹಂದಿಕುಂಟೆ ಗ್ರಾಮದಲ್ಲಿ ನಡೆದಿದೆ.

ಕೆಎಸ್ಆರ್ಟಿಸಿ ಬಸ್ ಚಾಲಕ ಮಂಜುನಾಥ್ ಅವರು ಹೆಣ್ಣುಮಕ್ಕಳನ್ನು ರಕ್ಷಿಸಿ ಮಾನವೀಯತೆ ತೋರಿದ್ದಾರೆ. ಶಿರಾ ಘಟಕದ ಬಸ್ ಚಾಲಕರಾಗಿರುವ ಮಂಜುನಾಥ್ ಶಿರಾ ಮಾರ್ಗವಾಗಿ ಬಸ್ ಚಾಲನೆ ಮಾಡಿಕೊಂಡು ಬರುವಾಗ ಕೆರೆಯಲ್ಲಿ ಬಾಲಕಿಯರು ಮುಳುಗುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಬಸ್ ನಿಲ್ಲಿಸಿದ ಅವರು ಓಡಿ ಹೋಗಿ ಕೆರೆಗೆ ಜಿಗಿದು ಇಬ್ಬರನ್ನು ನೀರಿನಿಂದ ಹೊರ ತಂದು ಕಾಪಾಡಿದ್ದಾರೆ. ಹಂದಿಕುಂಟೆ ಅಗ್ರಹಾರ ಕೆರೆಯಲ್ಲಿ ಸಹೋದರಿಯರು ಬಟ್ಟೆ ತೊಳೆಯಲು ಹೋದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದು, ಇದೇ ಮಾರ್ಗವಾಗಿ ತೆರಳುತ್ತಿದ್ದ ಮಂಜುನಾಥ್ ಅವರನ್ನು ಗಮನಿಸಿ ರಕ್ಷಿಸಿದ್ದಾರೆ.

ಮಂಜುನಾಥ್ ಅವರ ಸಮಯ ಪ್ರಜ್ಞೆಯಿಂದ ಬಾಲಕಿಯರು ಬದುಕುಳಿದಿದ್ದಾರೆ. ಅವರ ಮಾನವೀಯ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ನಿಗಮದ ಅಧಿಕಾರಿಗಳು ಸನ್ಮಾನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...