alex Certify BIG NEWS: ಕರ್ನಾಟಕಕ್ಕೆ ಮುಂಬೈ ಸೇರ್ಪಡೆಗೆ ಒತ್ತಾಯ, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶ ಮಾಡಲಿ; ಸವದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರ್ನಾಟಕಕ್ಕೆ ಮುಂಬೈ ಸೇರ್ಪಡೆಗೆ ಒತ್ತಾಯ, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶ ಮಾಡಲಿ; ಸವದಿ

ಬೆಳಗಾವಿ: ಮುಂಬೈ ಮೇಲೆ ನಮಗೂ ಹಕ್ಕು ಇದೆ. ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಬೇಡಿಕೆ ಇಡುತ್ತೇವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಮರಾಠಿ ಭಾಷಿಕ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸವದಿ ಅವರು ತಿರುಗೇಟು ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಬೊರಗಾಂವದಲ್ಲಿ ಬಸ್ ತಂಗುದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಲಕ್ಷ್ಮಣ ಸವದಿ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಮುಂಬೈ-ಕರ್ನಾಟಕ ಪ್ರದೇಶದವರು. ಮುಂಬೈ ನಮ್ಮದು, ಮುಂಬೈ ಕರ್ನಾಟಕ ಭಾಗದ ಜನರಿಗೆ ಮುಂಬೈ ಮೇಲೆ ಹಕ್ಕು ಇದೆ ಎಂದು ತಿಳಿಸಿದ್ದಾರೆ.

ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸುವಂತೆ ಈಗಿನಿಂದಲೇ ಬೇಡಿಕೆ ಇಡಲಾಗುವುದು. ನಮಗೆ ಮುಂಬೈ ಮೇಲೆ ಹಕ್ಕು ಸಿಗುವವರೆಗೆ ಅದನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಆಗ ಎಲ್ಲವೂ ಸರಿ ಹೋಗಲಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...