alex Certify BIG NEWS: ರಾಜ್ಯದಲ್ಲಿ ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದೆ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದೆ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯ

ಬೆಳಗಾವಿ: ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ನೀಡಿದ್ದ ಹೇಳಿಕೆ ನಿಜ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಬಿಜೆಪಿಯ 8 ಶಾಸಕರು ಶೀಘ್ರದಲ್ಲಿಯೇ ಕಾಂಗ್ರೆಸ್ ಸೇರಲಿದ್ದಾರೆ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಆಲ್ ಮೋಸ್ಟ್ ಕಾಂಗ್ರೆಸ್ ಗೆ ಬಂದಾಗಿದೆ. ಶೀಘ್ರದಲ್ಲಿಯೇ ಇನ್ನೂ ಕೆಲ ಬಿಉಜೆಪಿ ಶಾಸಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದರು.

ರಾಜ್ಯ ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದೆ. ಬಿಜೆಪಿಯಲ್ಲಿ ಮನೆಯೊಂದು 6 ಬಾಗಿಲು ಎಂಬಾಂತಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ನಶಿಸಿ ಹೋಗುವುದು ಕಾಣಿಸುತ್ತಿದೆ. ಪಕ್ಷದಲ್ಲಿ ಭಿನ್ನಾಭಿಪ್ರಾಯ, ಆಂತರಿಕ ಕಲಹ ಹೆಚ್ಚುತ್ತಿದೆ. ಸಣ್ಣಪುಟ್ಟ ವೈಮನಸ್ಯವನ್ನೇ ಸರಿಮಾಡುವ ಸಾಮರ್ಥ್ಯ ಯಾರಿಗೂ ಇಲ್ಲ ಎಂದರು.

ಯೋಗೇಶ್ವರ್ ಗೆ ಟಿಕೆಟ್ ಕೊಡದಿದ್ದಕ್ಕೆ ಅವರು ಹೊರಬಂದಿದ್ದಾರೆ. ಪಕ್ಷದ ಮೂಲ ಮುಖಂಡರ ಸಾಧಕ-ಬಾಧಕ ನೋಡಬೇಕಾಗುತ್ತದೆ ದಿಢೀರ್ ಅಂತಾ ಒಬ್ಬರನ್ನು ನಿಲ್ಲಿಸಿದ್ರೆ ಹಳಬರು ಏನು ಮಾಡಬೇಕು? ಮುಂದಿನ ದಿನಗಳಲ್ಲಿ ಬಹಳ ವಿಚಿತ್ರ ಸನ್ನಿವೇಶ ಎದುರಾಗಲಿದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...