alex Certify ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ಅಪಘಾತದಲ್ಲಿ ಗಾಯಗೊಂಡ ಸವಾರನಿಗೆ ನೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ಅಪಘಾತದಲ್ಲಿ ಗಾಯಗೊಂಡ ಸವಾರನಿಗೆ ನೆರವು

ಚಾಮರಾಜನಗರ: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ಬೈಕ್ ಸವಾರನಿಗೆ ನೆರವಾಗುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ.

ಚಾಮರಾಜನಗರ ಸಂತೆಮರಹಳ್ಳಿ ಮುಖ್ಯರಸ್ತೆಯ ಅಂಬೇಡ್ಕರ್ ಸರ್ಕಲ್ ಬಳಿ ಬೈಕ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದ್ದು ಟಿ. ನರಸೀಪುರ ತಾಲೂಕಿನ ಗರ್ಗೇಶ್ವರಿ ಗ್ರಾಮದ ಯುವಕ ಸುಹೇಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಸವಾರ ಅಬ್ದುಲ್ ರಶೀದ್ ತಲೆಗೆ ತೀವ್ರ ಪೆಟ್ಟಾಗಿ ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದರು.

ಚಾಮರಾಜನಗರದಲ್ಲಿ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪೂರ್ವ ಸಿದ್ಧತಾ ಸಭೆ ಮುಗಿಸಿಕೊಂಡು ಮಂಡ್ಯಕ್ಕೆ ಇದೇ ಮಾರ್ಗವಾಗಿ ತೆರಳುತ್ತಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಪಘಾತವಾಗಿರುವುದನ್ನು ಕಂಡು ಕೂಡಲೇ ಕಾರು ನಿಲ್ಲಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಸಚಿವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...