alex Certify BIG NEWS: ಕೃಷಿ ಭೂಮಿ ಪರಿವರ್ತನೆಗೆ ಇನ್ನು ಹೊಸ ವ್ಯವಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೃಷಿ ಭೂಮಿ ಪರಿವರ್ತನೆಗೆ ಇನ್ನು ಹೊಸ ವ್ಯವಸ್ಥೆ

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸಿಕೊಳ್ಳಲು ಭೂ ಪರಿವರ್ತನೆಗೆ ಇನ್ನುಮುಂದೆ ವರ್ಷಗಟ್ಟಲೆ ಕಾಯುವ ಅಗತ್ಯವಿರುವುದಿಲ್ಲ. ಮೂರು ದಿನಗಳ ಅವಧಿಯಲ್ಲಿ ಅರ್ಜಿದಾರರಿಗೆ ಭೂ ಪರಿವರ್ತನೆ ಮಾಡಿಸಿಕೊಳ್ಳುವ ವ್ಯವಸ್ಥೆ ಜಾರಿಗೆ ಬರಲಿದೆ.

ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಜಿಲ್ಲಾಧಿಕಾರಿಗಳಿಗೆ ನೇರ ಹೊಣೆ ನೀಡಲಾಗುತ್ತದೆ. ಕೃಷಿಭೂಮಿಯನ್ನು ಕೈಗಾರಿಕೆ, ವಸತಿ, ವಾಣಿಜ್ಯ ಮೊದಲಾದ ಕೃಷಿಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಭೂಪರಿವರ್ತನೆ ಮಾಡಿಕೊಳ್ಳಬೇಕಿತ್ತು. ಇದು ಸುಲಭದ ಕೆಲಸವಲ್ಲ, ವರ್ಷಗಟ್ಟಲೆ ಅಲೆದಾಡಬೇಕಿದ್ದು, ಇದನ್ನು ತಪ್ಪಿಸಲು ಸರಳ ದಾಖಲೆಗಳೊಂದಿಗೆ ಮೂರು ದಿನದೊಳಗೆ ಭೂಪರಿವರ್ತನೆ ಮಾಡಿಕೊಡುವ ವ್ಯವಸ್ಥೆ ಜಾರಿ ತರಲಾಗುತ್ತಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...