alex Certify ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಉಚಿತವಾಗಿ ಮನೆಬಾಗಿಲಿಗೆ RTC, ಜಮೀನಿನ ನಕಾಶೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಉಚಿತವಾಗಿ ಮನೆಬಾಗಿಲಿಗೆ RTC, ಜಮೀನಿನ ನಕಾಶೆ

ಬೆಂಗಳೂರು: ಜನವರಿ 20 ರಿಂದ ರಾಜ್ಯಾದ್ಯಂತ ರೈತರ ಮನೆ ಬಾಗಿಲಿಗೆ ಉಚಿತವಾಗಿ ಆರ್.ಟಿ.ಸಿ. ತಲುಪಿಸುವ ಯೋಜನೆ ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಮನೆಬಾಗಿಲಿಗೆ ಸರ್ಕಾರದ ಯೋಜನೆ ತಲುಪಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕನಸಿನ ಯೋಜನೆ ಜಾರಿಗೆ ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದ 45 ಲಕ್ಷ ರೈತರಿಗೆ ಅವರ ಜಮೀನಿನ ಪಹಣಿ, ಆರ್.ಟಿ.ಸಿ. ಹಾಗೂ ಜಮೀನಿನ ನಕಾಶೆ ಸಗ್ರಹಿಸಿಟ್ಟುಕೊಳ್ಳಲು ಅನುಕೂಲವಾಗುವಂತೆ ಉಚಿತವಾಗಿ ಆರ್.ಟಿ.ಸಿ., ನಕಾಶೆ ತಲುಪಿಸಲಾಗುವುದು ಎಂದು ತಿಳಿಸಿದ್ದಾರೆ.

ರೈತರು ತಮ್ಮ ಜಮೀನನ್ನು ವಸತಿ ಅಥವಾ ವಿವಿಧ ಉದ್ದೇಶಗಳಿಗೆ ಭೂ ಪರಿವರ್ತನೆ ಮಾಡಲು 6 ತಿಂಗಳಿಂದ 1 ವರ್ಷದವರೆಗೆ ಅಲೆದಾಡಬೇಕಾಗಿದ್ದು, ಇದನ್ನು ತಪ್ಪಿಸಿ ನಿಯಮ ಸರಳೀಕರಣ ಮಾಡಲಾಗಿದ್ದು, ಒಂದೇ ದಿನದಲ್ಲಿ ಭೂ ಪರಿವರ್ತನೆ ಮಾಡುವ ಯೋಜನೆ ಶೀಘ್ರವೇ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...