alex Certify ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್, ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್, ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ

ಬೆಂಗಳೂರು: ರಾಜ್ಯ ಸರ್ಕಾರ ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಇದರಿಂದ 70 ಸಾವಿರ ಎಕರೆ ಜಮೀನು ಲಕ್ಷಾಂತರ ರೈತರ ಹೆಸರಿನಲ್ಲಿ ದಾಖಲಾಗಲಿದೆ.

ರೈತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇನಾಂ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆಸಿದೆ. ಈ ಕುರಿತಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ ಸಮಿತಿಯ ಶಿಫಾರಸನ್ನು ಪರಿಗಣಿಸಿ ಕಾಯ್ದೆ ತಿದ್ದುಪಡಿಗೆ ಸರ್ಕಾರ ಚಿಂತನೆ ನಡೆಸಿದೆ.

ಇನಾಂ ಜಮೀನುಗಳ ಭೋಗದ ಹಕ್ಕು ಪಡೆಯಲು ಜಿಲ್ಲಾಧಿಕಾರಿ, ಉಪ ನೋಂದಣಾಧಿಕಾರಿ, ತಹಶೀಲ್ದಾರ್, ಭೂ ನ್ಯಾಯ ಮಂಡಳಿಗೆ ಅರ್ಜಿ ಸಲ್ಲಿಸಬೇಕಿದೆ.‌ ಈಗಾಗಲೇ ರಾಜ್ಯ ಸರ್ಕಾರದ ವತಿಯಿಂದ ಇನಾಂ ರದ್ದತಿ ಕಾಯ್ದೆಯ ಮೂಲಕ ರಾಜ್ಯದ ಇನಾಂ ಜಮೀನು ಉಳುಮೆ ಮಾಡುವ ರೈತರ ಹೆಸರಿಗೆ ಸ್ವಾಧೀನದ ಹಕ್ಕು ಪತ್ರ ನೀಡಿದ್ದು, ಇದರ ಹೊರತಾಗಿಯೂ ಅನೇಕ ಜಿಲ್ಲೆಗಳಲ್ಲಿ, ರೈತರು ಹಾಗೆಯೇ ಉಳುಮೆ ಮಾಡಿಕೊಂಡು ಹೋಗುತ್ತಿದ್ದಾರೆ. ಇದರಿಂದಾಗಿ ರೈತರಿಗೆ ಬ್ಯಾಂಕುಗಳಲ್ಲಿ ಸಾಲ ದೊರೆಯುತ್ತಿಲ್ಲ. ಭೂಮಿಯ ಅಧಿಕೃತ ಹಕ್ಕು, ಪಹಣಿ ಇಲ್ಲದೆ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ 70 ಸಾವಿರ ಎಕರೆಯಷ್ಟು ಜಮೀನನ್ನು ರೈತರ ಹೆಸರಿಗೆ ದಾಖಲಿಸಿ ಕೊಡಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...